Featured

ಲೈಂಗಿನ ದೌರ್ಜನ್ಯ ಪ್ರಕರಣ : ದನುಷ್ಕಾ ಗುಣತಿಲಕರನ್ನು ಎಲ್ಲಾ ಮಾದರಿ ಕ್ರಿಕೆಟ್ ನಿಂದ ಅಮಾನತು ಮಾಡಿದ ಲಂಕಾ ಬೋರ್ಡ್ – Vishwanews24

ಲೈಂಗಿನ ದೌರ್ಜನ್ಯ ಪ್ರಕರಣ : ದನುಷ್ಕಾ ಗುಣತಿಲಕರನ್ನು ಎಲ್ಲಾ ಮಾದರಿ ಕ್ರಿಕೆಟ್ ನಿಂದ ಅಮಾನತು ಮಾಡಿದ ಲಂಕಾ ಬೋರ್ಡ್

ಸಿಡ್ನಿ: ಲೈಂಗಿನ ದೌರ್ಜನ್ಯ ಪ್ರಕರಣದಡಿಯಲ್ಲಿ ಸಿಲುಕಿ ಆಸ್ಟ್ರೇಲಿಯಾದಲ್ಲಿ ಪೊಲೀಸರ ಅತಿಥಿಯಾಗಿರುವ ಶ್ರೀಲಂಕಾ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ಲಂಕಾ ಕ್ರಿಕೆಟ್ ನಿಂದ ಅಮಾನತು ಮಾಡಲಾಗಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯಕಾರಿ ಸಮಿತಿಯು ಈ ಬಗ್ಗೆ ಇಂದು ತೀರ್ಮಾನಿಸಿದೆ.

ತಕ್ಷಣವೇ ಜಾರಿಗೆ ಬರುವಂತೆ ರಾಷ್ಟ್ರೀಯ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಅಮಾನತುಗೊಳಿಸಲು ಮಂಡಳಿ ನಿರ್ಧರಿಸಿದೆ. ಅವರನ್ನು ಯಾವುದೇ ಆಯ್ಕೆಗಳಿಗೆ ಪರಿಗಣಿಸುವುದಿಲ್ಲ ಎಂದು ವರದಿ ತಿಳಿಸಿದೆ.

ಲಂಕಾದ ಕ್ರಿಕೆಟ್ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ರವಿವಾರ ಬೆಳಗ್ಗೆ ಸಿಡ್ನಿ ಪೊಲೀಸರು ಟೀಂ ಹೋಟೆಲ್ ನಿಂದ ಬಂಧಿಸಿದ್ದರು. ಮಹಿಳೆಯೊಬ್ಬರಿಗೆ ಲೈಂಗಿಕವಾಗಿ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಗುಣತಿಲಕ ಬಂಧನವಾಗಿದೆ. ವಿಶ್ವಕಪ್ ನಿಂದ ಹೊರಬಿದ್ದಿರುವ ಲಂಕಾ ತಂಡವು ಗುಣತಿಲಕ ಅವರನ್ನು ಬಿಟ್ಟು ಶ್ರೀಲಂಕಾಗೆ ಪ್ರಯಾಣಿಸಿದೆ.

ಚಂದ್ರಗ್ರಹಣ – ಹಲವು ದೇವಾಲಯಗಳಲ್ಲಿ ಪ್ರವೇಶ ನಿರ್ಬಂಧ

ಗುಣತಿಲಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ಜಾಮೀನು ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.

ದನುಷ್ಕ ಗುಣತಿಲಕ ಮತ್ತು ಅತ್ಯಾಚಾರ ಆರೋಪ ಮಾಡಿರುವ ಮಹಿಳೆಯ ನಡುವೆ ಡೇಟಿಂಗ್‌ ಆಯಪ್‌ ವೊಂದರಲ್ಲಿ ಬಹಳ ದಿನಗಳಿಂದ ಮಾತುಕತೆ ನಡೆದಿದೆ. ನ.2ರಂದು ರೋಸ್‌ ಬೇನಲ್ಲಿರುವ ನಿವಾಸವೊಂದರಲ್ಲಿ ಇಬ್ಬರೂ ಒಟ್ಟಾಗಿದ್ದಾರೆ. ಆ ವೇಳೆ ಗುಣತಿಲಕ ತನ್ನನ್ನು ಅತ್ಯಾಚಾರ ಕ್ಕೊಳಪಡಿಸಿದ್ದಾರೆನ್ನುವುದು ಮಹಿಳೆಯ ಆರೋಪ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

19 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

19 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

19 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

20 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

21 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

3 days ago