ಬೆಂಗಳೂರು: ಗನ್ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೂವಿನ ಹಾರ ಹಾಕಿರುವ ರಿಯಾಜ್ ಅಹಮದ್ ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ರಿಯಾಜ್ ತಾವು ಗನ್ ಇಟ್ಟುಕೊಂಡಿರಲು ಕಾರಣವನ್ನು ತಿಳಿಸಿದ್ದಾರೆ.
ಸಿದ್ದಾಪುರ ಪೊಲೀಸರ ವಿಚಾರಣೆ ವೇಳೆ ರಿಯಾಜ್, ನಂಗೆ ಲೈಫ್ ಥ್ರೆಟ್ ಇದೆ. ಹೀಗಾಗಿ ಪ್ರತೀ ದಿನ ಗನ್ ಇಟ್ಟುಕೊಂಡೇ ಹೊರಗೆ ಬರುತ್ತೇನೆ. ಹೊರತು ಸಿಎಂ ಮುಂದೆ ಗನ್ ಪ್ರದರ್ಶನ ಮಾಡಬೇಕು ಅನ್ನೊ ಉದ್ದೇಶ ನನಗಿರಲಿಲ್ಲ ಎಂದು ತಿಳಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ನಮ್ಮ ದೇವರಾಜ್ ಸಾಹೇಬ್ರು ಮೇಲೆ ಬಾ ಅಂದ್ರು. ಹೀಗಾಗಿ ವೆಹಿಕಲ್ ಮೇಲೆ ಹೋಗಿ ಸಿಎಂ ಸಾಹೇಬ್ರಿಗೆ ಹಾರ ಹಾಕಿದೆ. ಅವರು ಕರೆಯದಿದ್ದರೆ ನಾನು ಸಿಎಂ ಬಳಿ ಹೋಗ್ತಿರಲಿಲ್ಲ. ನನ್ನ ಪಾಡಿಗೆ ನಾನು ಸಿಎಂ ಪ್ರಚಾರದ ವೆಹಿಕಲ್ ಬಂದಾಗ ಸೈಡಲ್ಲಿ ನಿಂತುಕೊಂಡು ನೋಡುತ್ತಿದ್ದೆ. ವೆಹಿಕಲ್ ಮೇಲೇರಿದಾಗ ಆಕಸ್ಮಿಕವಾಗಿ ಸೊಂಟದಲ್ಲಿದ್ದ ಗನ್ ಕಂಡಿದೆ. ನಾನು ಗನ್ ಶೋ ಮಾಡಿಲ್ಲ ಎಂದು ರಿಯಾಜ್ ಪೊಲೀಸರ ಮುಂದೆ ಹೇಳಿದ್ದು, ಇದೀಗ ರಿಯಾಜ್ ಹೇಳಿಕೆಯನ್ನು ಸಿದ್ದಾಪುರ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಏನಿದು ಪ್ರಕರಣ?: ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ರಿಯಾಜ್ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿ ಅಲ್ಲಿಂದ ತೆರಳಿದ್ದಾರೆ. ರಿಯಾಜ್ ಬಳಿ ಗನ್ ಇರುವುದನ್ನು ಪೊಲೀಸರು ಗಮನಿಸಿಲ್ಲ. ಆದರೆ ಬಳಿಕ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಭಾರೀ ಸುದ್ದಿಯಾಯಿತು.
.
ರಿಯಾಜ್ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, 5 ವರ್ಷಗಳ ಹಿಂದೆ ತನ್ನ ಮೇಲೆ ಕೊಲೆ ಯತ್ನವಾದ ಬಳಿಕ ಗನ್ ಪರವಾನಿಗೆ ಪಡೆದುಕೊಂಡಿರುವುದಾಗಿ ತಿಳಿದುಬಂದಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…