ಬೆಂಗಳೂರು: ಗನ್ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೂವಿನ ಹಾರ ಹಾಕಿರುವ ರಿಯಾಜ್ ಅಹಮದ್ ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ರಿಯಾಜ್ ತಾವು ಗನ್ ಇಟ್ಟುಕೊಂಡಿರಲು ಕಾರಣವನ್ನು ತಿಳಿಸಿದ್ದಾರೆ.
ಸಿದ್ದಾಪುರ ಪೊಲೀಸರ ವಿಚಾರಣೆ ವೇಳೆ ರಿಯಾಜ್, ನಂಗೆ ಲೈಫ್ ಥ್ರೆಟ್ ಇದೆ. ಹೀಗಾಗಿ ಪ್ರತೀ ದಿನ ಗನ್ ಇಟ್ಟುಕೊಂಡೇ ಹೊರಗೆ ಬರುತ್ತೇನೆ. ಹೊರತು ಸಿಎಂ ಮುಂದೆ ಗನ್ ಪ್ರದರ್ಶನ ಮಾಡಬೇಕು ಅನ್ನೊ ಉದ್ದೇಶ ನನಗಿರಲಿಲ್ಲ ಎಂದು ತಿಳಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ನಮ್ಮ ದೇವರಾಜ್ ಸಾಹೇಬ್ರು ಮೇಲೆ ಬಾ ಅಂದ್ರು. ಹೀಗಾಗಿ ವೆಹಿಕಲ್ ಮೇಲೆ ಹೋಗಿ ಸಿಎಂ ಸಾಹೇಬ್ರಿಗೆ ಹಾರ ಹಾಕಿದೆ. ಅವರು ಕರೆಯದಿದ್ದರೆ ನಾನು ಸಿಎಂ ಬಳಿ ಹೋಗ್ತಿರಲಿಲ್ಲ. ನನ್ನ ಪಾಡಿಗೆ ನಾನು ಸಿಎಂ ಪ್ರಚಾರದ ವೆಹಿಕಲ್ ಬಂದಾಗ ಸೈಡಲ್ಲಿ ನಿಂತುಕೊಂಡು ನೋಡುತ್ತಿದ್ದೆ. ವೆಹಿಕಲ್ ಮೇಲೇರಿದಾಗ ಆಕಸ್ಮಿಕವಾಗಿ ಸೊಂಟದಲ್ಲಿದ್ದ ಗನ್ ಕಂಡಿದೆ. ನಾನು ಗನ್ ಶೋ ಮಾಡಿಲ್ಲ ಎಂದು ರಿಯಾಜ್ ಪೊಲೀಸರ ಮುಂದೆ ಹೇಳಿದ್ದು, ಇದೀಗ ರಿಯಾಜ್ ಹೇಳಿಕೆಯನ್ನು ಸಿದ್ದಾಪುರ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಏನಿದು ಪ್ರಕರಣ?: ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ರಿಯಾಜ್ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿ ಅಲ್ಲಿಂದ ತೆರಳಿದ್ದಾರೆ. ರಿಯಾಜ್ ಬಳಿ ಗನ್ ಇರುವುದನ್ನು ಪೊಲೀಸರು ಗಮನಿಸಿಲ್ಲ. ಆದರೆ ಬಳಿಕ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಭಾರೀ ಸುದ್ದಿಯಾಯಿತು.
.
ರಿಯಾಜ್ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, 5 ವರ್ಷಗಳ ಹಿಂದೆ ತನ್ನ ಮೇಲೆ ಕೊಲೆ ಯತ್ನವಾದ ಬಳಿಕ ಗನ್ ಪರವಾನಿಗೆ ಪಡೆದುಕೊಂಡಿರುವುದಾಗಿ ತಿಳಿದುಬಂದಿತ್ತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…