ರಾಜ್ಯ ನ್ಯೂಸ್

ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಳಕೆ : ದೇಶದಲ್ಲಿಯೇ ದ್ವಿತೀಯ ಸ್ಥಾನ ಪಡೆದ ಸಂಸದ ಬಿ.ವೈ.ರಾಘವೇಂದ್ರ – Vishwanews24

ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಳಕೆ : ದೇಶದಲ್ಲಿಯೇ ದ್ವಿತೀಯ ಸ್ಥಾನ ಪಡೆದ ಸಂಸದ ಬಿ.ವೈ.ರಾಘವೇಂದ್ರ – Vishwanews24

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಳಕೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ದೇಶದಲ್ಲಿಯೇ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಬಿ.ವೈ ರಾಘವೇಂದ್ರ ಅವರು ತಮ್ಮ ಸಂಸದರ ನಿಧಿಯಡಿ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವು ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಿಲ್ಲಾದ್ಯಂತ ಅನುಷ್ಠಾನಗೊಳಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಸದರ ನಿಧಿ ಬಳಕೆಯಲ್ಲಿ ದೇಶಕ್ಕೆ 2ನೇ ಸ್ಥಾನದಲ್ಲಿದ್ದಾರೆ.

2019-20ರ ಸಾಲಿಗೆ ಸಂಬಂಧಿಸಿದಂತೆ 5 ಕೋಟಿ ರೂ ಅನುದಾನ ಹಾಗೂ 10 ರಿಂದ 15ನೇ ಲೋಕಸಭೆವರೆಗೆ ಬಳಕೆಯಾಗದೇ ಇದ್ದ 4.40 ಕೋಟಿ ರೂ ಅನುದಾನ ಸೇರಿದಂತೆ 9.40 ಕೋಟಿ ರೂ.ಗಳಲ್ಲಿ ಈಗಾಗಲೇ 9 ಕೋಟಿ ರೂ ಬಳಕೆ ಮಾಡಿದ್ದಾರೆ.

ಅನುದಾನ ಬಳಕೆ ವಿವರ:

  • ಸಾರ್ವಜನಿಕ ಬಸ್ ಶೆಲ್ಟರ್ ಗಳು, ಹೈಮಾಸ್ಟ್ ಲೈಟ್, ಶಾಲಾ ಕೊಠಡಿ ಮತ್ತು ಸಾರ್ವಜನಿಕ ಸಮುದಾಯ ಭವನಕ್ಕೆ 4.70 ಕೋಟಿ ರೂ. ನೀಡಿದ್ದಾರೆ.
  • ರಸ್ತೆ ನಿರ್ಮಾಣಕ್ಕೆ 2.93 ಕೋಟಿ ರೂ ಅನುದಾನ
  • ಕೊರೊನಾ ನಿರ್ವಹಣೆಗೆ, ಆರೋಗ್ಯ ಇಲಾಖೆಗೆ ಆ್ಯಂಬುಲೆನ್ಸ್ ಮತ್ತು ಡಯಾಲಿಸಿಸ್ ಯಂತ್ರ ಅಳವಡಿಕೆಗೆ 8.50 ಲಕ್ಷ ರೂ.
  • ಕುಡಿಯುವ ನೀರಿನ ಘಟಕಕ್ಕೆ 42 ಲಕ್ಷ ರೂ. ಹಾಗು ಅಂಗವಿಕಲರಿಗೆ ತ್ರಿಚಕ್ರ ವಾಹನ ಹೀಗೆ ಅನೇಕ ಉಪಯುಕ್ತ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಉಳಿದ ಅನುದಾನ ಬಳಕೆ ಮಾಡಿದ್ದಾರೆ.
2 ಕೋಟಿ ರೂ. ಅನುದಾನ ಬಿಡುಗಡೆ:

ಕೊರೊನಾ ಸಾಂಕ್ರಾಮಿಕ ರೋಗದ ಹರಡುವಿಕೆಯ ಹಿನ್ನೆಲೆ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2020-21 ಹಾಗೂ 2021-22ರ ಎರಡು ವರ್ಷಗಳ ಸಂಸದರ ನಿಧಿಯನ್ನು ಕೋವಿಡ್​​ ಸಂಕಷ್ಟದ ಆರ್ಥಿಕ ಪರಿಸ್ಥಿತಿ ನಿರ್ವಹಣೆಗೆ ನೀಡಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈ ಗೊಂಡಿದ್ದು, 2021-22ನೇ ಸಾಲಿನಲ್ಲಿ ಸ್ಥಗಿತಗೊಂಡಿದ್ದ ಸಂಸದರ ನಿಧಿಯಲ್ಲಿ 2 ಕೋಟಿ ರೂ. ಬಿಡುಗಡೆ ಮಾಡಿದೆ.

ಹೀಗಾಗಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರಅವರು ಪ್ರಧಾನಿ ಶ್ರೀ ನರೇಂದ್ರ ಮೋದಿ, ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್‌ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago