ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಳಕೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ದೇಶದಲ್ಲಿಯೇ ದ್ವಿತೀಯ ಸ್ಥಾನ ಪಡೆದಿದ್ದಾರೆ.
2019-20ರ ಸಾಲಿಗೆ ಸಂಬಂಧಿಸಿದಂತೆ 5 ಕೋಟಿ ರೂ ಅನುದಾನ ಹಾಗೂ 10 ರಿಂದ 15ನೇ ಲೋಕಸಭೆವರೆಗೆ ಬಳಕೆಯಾಗದೇ ಇದ್ದ 4.40 ಕೋಟಿ ರೂ ಅನುದಾನ ಸೇರಿದಂತೆ 9.40 ಕೋಟಿ ರೂ.ಗಳಲ್ಲಿ ಈಗಾಗಲೇ 9 ಕೋಟಿ ರೂ ಬಳಕೆ ಮಾಡಿದ್ದಾರೆ.
ಅನುದಾನ ಬಳಕೆ ವಿವರ:
ಕೊರೊನಾ ಸಾಂಕ್ರಾಮಿಕ ರೋಗದ ಹರಡುವಿಕೆಯ ಹಿನ್ನೆಲೆ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2020-21 ಹಾಗೂ 2021-22ರ ಎರಡು ವರ್ಷಗಳ ಸಂಸದರ ನಿಧಿಯನ್ನು ಕೋವಿಡ್ ಸಂಕಷ್ಟದ ಆರ್ಥಿಕ ಪರಿಸ್ಥಿತಿ ನಿರ್ವಹಣೆಗೆ ನೀಡಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈ ಗೊಂಡಿದ್ದು, 2021-22ನೇ ಸಾಲಿನಲ್ಲಿ ಸ್ಥಗಿತಗೊಂಡಿದ್ದ ಸಂಸದರ ನಿಧಿಯಲ್ಲಿ 2 ಕೋಟಿ ರೂ. ಬಿಡುಗಡೆ ಮಾಡಿದೆ.
ಹೀಗಾಗಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರಅವರು ಪ್ರಧಾನಿ ಶ್ರೀ ನರೇಂದ್ರ ಮೋದಿ, ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…