ರಾಜ್ಯ ನ್ಯೂಸ್

ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಳಕೆ : ದೇಶದಲ್ಲಿಯೇ ದ್ವಿತೀಯ ಸ್ಥಾನ ಪಡೆದ ಸಂಸದ ಬಿ.ವೈ.ರಾಘವೇಂದ್ರ – Vishwanews24

ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಳಕೆ : ದೇಶದಲ್ಲಿಯೇ ದ್ವಿತೀಯ ಸ್ಥಾನ ಪಡೆದ ಸಂಸದ ಬಿ.ವೈ.ರಾಘವೇಂದ್ರ – Vishwanews24

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಳಕೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ದೇಶದಲ್ಲಿಯೇ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಬಿ.ವೈ ರಾಘವೇಂದ್ರ ಅವರು ತಮ್ಮ ಸಂಸದರ ನಿಧಿಯಡಿ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವು ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಿಲ್ಲಾದ್ಯಂತ ಅನುಷ್ಠಾನಗೊಳಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಸದರ ನಿಧಿ ಬಳಕೆಯಲ್ಲಿ ದೇಶಕ್ಕೆ 2ನೇ ಸ್ಥಾನದಲ್ಲಿದ್ದಾರೆ.

2019-20ರ ಸಾಲಿಗೆ ಸಂಬಂಧಿಸಿದಂತೆ 5 ಕೋಟಿ ರೂ ಅನುದಾನ ಹಾಗೂ 10 ರಿಂದ 15ನೇ ಲೋಕಸಭೆವರೆಗೆ ಬಳಕೆಯಾಗದೇ ಇದ್ದ 4.40 ಕೋಟಿ ರೂ ಅನುದಾನ ಸೇರಿದಂತೆ 9.40 ಕೋಟಿ ರೂ.ಗಳಲ್ಲಿ ಈಗಾಗಲೇ 9 ಕೋಟಿ ರೂ ಬಳಕೆ ಮಾಡಿದ್ದಾರೆ.

ಅನುದಾನ ಬಳಕೆ ವಿವರ:

  • ಸಾರ್ವಜನಿಕ ಬಸ್ ಶೆಲ್ಟರ್ ಗಳು, ಹೈಮಾಸ್ಟ್ ಲೈಟ್, ಶಾಲಾ ಕೊಠಡಿ ಮತ್ತು ಸಾರ್ವಜನಿಕ ಸಮುದಾಯ ಭವನಕ್ಕೆ 4.70 ಕೋಟಿ ರೂ. ನೀಡಿದ್ದಾರೆ.
  • ರಸ್ತೆ ನಿರ್ಮಾಣಕ್ಕೆ 2.93 ಕೋಟಿ ರೂ ಅನುದಾನ
  • ಕೊರೊನಾ ನಿರ್ವಹಣೆಗೆ, ಆರೋಗ್ಯ ಇಲಾಖೆಗೆ ಆ್ಯಂಬುಲೆನ್ಸ್ ಮತ್ತು ಡಯಾಲಿಸಿಸ್ ಯಂತ್ರ ಅಳವಡಿಕೆಗೆ 8.50 ಲಕ್ಷ ರೂ.
  • ಕುಡಿಯುವ ನೀರಿನ ಘಟಕಕ್ಕೆ 42 ಲಕ್ಷ ರೂ. ಹಾಗು ಅಂಗವಿಕಲರಿಗೆ ತ್ರಿಚಕ್ರ ವಾಹನ ಹೀಗೆ ಅನೇಕ ಉಪಯುಕ್ತ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಉಳಿದ ಅನುದಾನ ಬಳಕೆ ಮಾಡಿದ್ದಾರೆ.
2 ಕೋಟಿ ರೂ. ಅನುದಾನ ಬಿಡುಗಡೆ:

ಕೊರೊನಾ ಸಾಂಕ್ರಾಮಿಕ ರೋಗದ ಹರಡುವಿಕೆಯ ಹಿನ್ನೆಲೆ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2020-21 ಹಾಗೂ 2021-22ರ ಎರಡು ವರ್ಷಗಳ ಸಂಸದರ ನಿಧಿಯನ್ನು ಕೋವಿಡ್​​ ಸಂಕಷ್ಟದ ಆರ್ಥಿಕ ಪರಿಸ್ಥಿತಿ ನಿರ್ವಹಣೆಗೆ ನೀಡಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈ ಗೊಂಡಿದ್ದು, 2021-22ನೇ ಸಾಲಿನಲ್ಲಿ ಸ್ಥಗಿತಗೊಂಡಿದ್ದ ಸಂಸದರ ನಿಧಿಯಲ್ಲಿ 2 ಕೋಟಿ ರೂ. ಬಿಡುಗಡೆ ಮಾಡಿದೆ.

ಹೀಗಾಗಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರಅವರು ಪ್ರಧಾನಿ ಶ್ರೀ ನರೇಂದ್ರ ಮೋದಿ, ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್‌ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

1 hour ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

2 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

2 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

3 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

4 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

4 hours ago