ರಾಜ್ಯ ನ್ಯೂಸ್

ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಳಕೆ : ದೇಶದಲ್ಲಿಯೇ ದ್ವಿತೀಯ ಸ್ಥಾನ ಪಡೆದ ಸಂಸದ ಬಿ.ವೈ.ರಾಘವೇಂದ್ರ – Vishwanews24

ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಳಕೆ : ದೇಶದಲ್ಲಿಯೇ ದ್ವಿತೀಯ ಸ್ಥಾನ ಪಡೆದ ಸಂಸದ ಬಿ.ವೈ.ರಾಘವೇಂದ್ರ – Vishwanews24

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಳಕೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ದೇಶದಲ್ಲಿಯೇ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಬಿ.ವೈ ರಾಘವೇಂದ್ರ ಅವರು ತಮ್ಮ ಸಂಸದರ ನಿಧಿಯಡಿ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವು ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಿಲ್ಲಾದ್ಯಂತ ಅನುಷ್ಠಾನಗೊಳಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಸದರ ನಿಧಿ ಬಳಕೆಯಲ್ಲಿ ದೇಶಕ್ಕೆ 2ನೇ ಸ್ಥಾನದಲ್ಲಿದ್ದಾರೆ.

2019-20ರ ಸಾಲಿಗೆ ಸಂಬಂಧಿಸಿದಂತೆ 5 ಕೋಟಿ ರೂ ಅನುದಾನ ಹಾಗೂ 10 ರಿಂದ 15ನೇ ಲೋಕಸಭೆವರೆಗೆ ಬಳಕೆಯಾಗದೇ ಇದ್ದ 4.40 ಕೋಟಿ ರೂ ಅನುದಾನ ಸೇರಿದಂತೆ 9.40 ಕೋಟಿ ರೂ.ಗಳಲ್ಲಿ ಈಗಾಗಲೇ 9 ಕೋಟಿ ರೂ ಬಳಕೆ ಮಾಡಿದ್ದಾರೆ.

ಅನುದಾನ ಬಳಕೆ ವಿವರ:

  • ಸಾರ್ವಜನಿಕ ಬಸ್ ಶೆಲ್ಟರ್ ಗಳು, ಹೈಮಾಸ್ಟ್ ಲೈಟ್, ಶಾಲಾ ಕೊಠಡಿ ಮತ್ತು ಸಾರ್ವಜನಿಕ ಸಮುದಾಯ ಭವನಕ್ಕೆ 4.70 ಕೋಟಿ ರೂ. ನೀಡಿದ್ದಾರೆ.
  • ರಸ್ತೆ ನಿರ್ಮಾಣಕ್ಕೆ 2.93 ಕೋಟಿ ರೂ ಅನುದಾನ
  • ಕೊರೊನಾ ನಿರ್ವಹಣೆಗೆ, ಆರೋಗ್ಯ ಇಲಾಖೆಗೆ ಆ್ಯಂಬುಲೆನ್ಸ್ ಮತ್ತು ಡಯಾಲಿಸಿಸ್ ಯಂತ್ರ ಅಳವಡಿಕೆಗೆ 8.50 ಲಕ್ಷ ರೂ.
  • ಕುಡಿಯುವ ನೀರಿನ ಘಟಕಕ್ಕೆ 42 ಲಕ್ಷ ರೂ. ಹಾಗು ಅಂಗವಿಕಲರಿಗೆ ತ್ರಿಚಕ್ರ ವಾಹನ ಹೀಗೆ ಅನೇಕ ಉಪಯುಕ್ತ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಉಳಿದ ಅನುದಾನ ಬಳಕೆ ಮಾಡಿದ್ದಾರೆ.
2 ಕೋಟಿ ರೂ. ಅನುದಾನ ಬಿಡುಗಡೆ:

ಕೊರೊನಾ ಸಾಂಕ್ರಾಮಿಕ ರೋಗದ ಹರಡುವಿಕೆಯ ಹಿನ್ನೆಲೆ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2020-21 ಹಾಗೂ 2021-22ರ ಎರಡು ವರ್ಷಗಳ ಸಂಸದರ ನಿಧಿಯನ್ನು ಕೋವಿಡ್​​ ಸಂಕಷ್ಟದ ಆರ್ಥಿಕ ಪರಿಸ್ಥಿತಿ ನಿರ್ವಹಣೆಗೆ ನೀಡಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈ ಗೊಂಡಿದ್ದು, 2021-22ನೇ ಸಾಲಿನಲ್ಲಿ ಸ್ಥಗಿತಗೊಂಡಿದ್ದ ಸಂಸದರ ನಿಧಿಯಲ್ಲಿ 2 ಕೋಟಿ ರೂ. ಬಿಡುಗಡೆ ಮಾಡಿದೆ.

ಹೀಗಾಗಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರಅವರು ಪ್ರಧಾನಿ ಶ್ರೀ ನರೇಂದ್ರ ಮೋದಿ, ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್‌ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago