Featured

ಲೋಕಸಭಾ ಚುನಾನಣೆ : ಸತತ 12 ಬಾರಿ ಗೆದ್ದು ಬೀಗಿದ ಖರ್ಗೆಯನ್ನು ಸೋಲಿಸಲು ಬಿಜೆಪಿಯಿಂದ ಉಮೇಶ್​ ಜಾಧವ್ ಕಣಕ್ಕೆ..-Vishwanews24

ಕಲಬುರಗಿ : ಸೋನಿಯಾ ಗಾಂಧಿ ಆತ್ಯಪ್ತರಾಗಿರುವ ಮಲ್ಲಿಕಾರ್ಜನ ಖರ್ಗ ಸೋಲಿಸಲು ಪಣತೊಟ್ಟಿದೆ. ಬಿಜೆಪಿ ಅಪರೇಷನ್​ ಕಮಲ ಮಾಡುವ ಮೂಲಕ ಉಮೇಶ್​ ಜಾಧವ್​ ಅವರನ್ನೇ ಖರ್ಗೆ ವಿರುದ್ಧ ಕಣಕ್ಕೆ ಇಳಿಸಿರುವ ಬಿಜೆಪಿ ಸಿದ್ಧವಾಗಿದ್ದು, ಈ ಮೂಲಕ ಚುನಾವಣೆ ರಣಕಹಳೆ ಮೊಳಗಿಸಿದೆ.

ಸತತ 12 ಬಾರಿ ಗೆಲ್ಲುವ ಮೂಲಕ ಸೋಲಿಲ್ಲದ ಸರದಾರನನಾಗಿರುವ ಖರ್ಗೆ ಸೋಲಿಸುವುದು ಸುಲಭದ ಮಾತಲ್ಲ.  ಸಂಸತ್ತಿನಲ್ಲಿ ತಮ್ಮ ವಿರುದ್ಧ ಅನೇಕ ಬಾರಿ ಗುಡುಗಿರುವ ಖರ್ಗೆ ಅವರಿಗೆ ಸೋಲಿನ ರುಚಿ ಖುದ್ದು ಮೋದಿಯೇ ಆಸಕ್ತಿವಹಿಸಿದ್ದಾರೆ. ಕೈ​ ಪಾಳೆಯದ ದೊಡ್ಡ ನಾಯಕನನ್ನೇ ಗುರಿಯಾಗಿಸಿಕೊಳ್ಳುವ ಮೂಲಕ ಕಾಂಗ್ರೆಸ್​ಗೆ ಭೀತಿ ಹುಟ್ಟಿಸಲು ಮುಂದಾಗಿರುವ ಮೋದಿ ಇದಕ್ಕಾಗಿ ಕ್ಷೇತ್ರದ ಉಸ್ತುವಾರಿಯನ್ನು ಕೇಂದ್ರ ಸಚಿವ ರಾಜನಾಥ್​ ಸಿಂಗ್​ಗೆ ನೀಡಿದ್ದಾರೆ . ಗೃಹ ಸಚಿವರು ಕೂಡ ಯಾವುದೇ  ಅಬ್ಬರ ಮಾಡದೇ ಖರ್ಗೆ ವಿರುದ್ಧ ಕಾರ್ಯರೂಪಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿರುವ ಅವರ ವಿರೋಧಿಗಳ್ನು ಒಟ್ಟುಗೂಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ..

ಈ ಬಾರಿ ಸಂಸತ್ತಿನಲ್ಲಿ ಖರ್ಗೆಯ ಭಾಷಣ ಕೊನೆಯಾಗ ಬೇಕು. ಈ ಮೂಲಕ ಕಾಂಗ್ರೆಸ್​ಗೆ ಭಾರೀ ಹೊಡೆತ ನೀಡಬೇಕು ಎಂದು ಬಿಜೆಪಿ ಸಿದ್ಧತೆ ನಡೆಸಿದೆ. ಲೋಕಸಭಾ ಚುನಾವಣೆಗೆ ಖರ್ಗೆ ಕ್ಷೇತ್ರದಲ್ಲಿಯೇ ಬೃಹತ್​ ಸಮಾವೇಶ ಹಮ್ಮಿಕೊಂಡಿರುವ ಮೂಲಕ ಈಗಾಗಲೇ ಪರೋಕ್ಷವಾಗಿ ಖರ್ಗೆ ವಿರುದ್ಧ ಗುಡುಗಿದ್ದಾರೆ. ಖರ್ಗೆ ವಿರುದ್ಧ ಅನುಕಂಪದಂತಹ, ಯಾವುದೇ ಸೂತ್ರಗಳು ಫಲಿಸದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ.

ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿರುವ ನಾಯಕರಾದ ಬಾಬುರಾವ್​ ಚಿಂಚನಸೂರು, ಮಾಲೀಕಯ್ಯ ಗುತ್ತೇದಾರ್​ ಕೂಡ ಖರ್ಗೆ ಸೋಲಿಸಲು ಶಪಥಮಾಡಿದ್ದಾರೆ. ಈಗ ಉಮೇಶ್​ ಜಾಧವ್​ ನೇರವಾಗಿ ಖರ್ಗೆ ವಿರುದ್ಧ ಸೆಡ್ಡುಹೊಡೆಯಲು ಸಜ್ಜಾಗಿದ್ದಾರೆ. ಸ್ಥಳೀಯ ನಾಯಕರ ಜೊತೆಗೆ ರಾಷ್ಟ್ರೀಯ ನಾಯಕರು ಕೂಡ ಈಗ ಕೈ ಜೋಡಿಸಿದ್ದು, ಖರ್ಗೆ ಸೋಲಿಗೆ ಭಾರೀ ರಣತಂತ್ರವೇ ಹೂಡಿದ್ದಾರೆ.

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

40 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

51 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

56 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

1 hour ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

19 hours ago