Featured

ಲೋಕಸಭಾ ಚುನಾನಣೆ : ಸತತ 12 ಬಾರಿ ಗೆದ್ದು ಬೀಗಿದ ಖರ್ಗೆಯನ್ನು ಸೋಲಿಸಲು ಬಿಜೆಪಿಯಿಂದ ಉಮೇಶ್​ ಜಾಧವ್ ಕಣಕ್ಕೆ..-Vishwanews24

ಕಲಬುರಗಿ : ಸೋನಿಯಾ ಗಾಂಧಿ ಆತ್ಯಪ್ತರಾಗಿರುವ ಮಲ್ಲಿಕಾರ್ಜನ ಖರ್ಗ ಸೋಲಿಸಲು ಪಣತೊಟ್ಟಿದೆ. ಬಿಜೆಪಿ ಅಪರೇಷನ್​ ಕಮಲ ಮಾಡುವ ಮೂಲಕ ಉಮೇಶ್​ ಜಾಧವ್​ ಅವರನ್ನೇ ಖರ್ಗೆ ವಿರುದ್ಧ ಕಣಕ್ಕೆ ಇಳಿಸಿರುವ ಬಿಜೆಪಿ ಸಿದ್ಧವಾಗಿದ್ದು, ಈ ಮೂಲಕ ಚುನಾವಣೆ ರಣಕಹಳೆ ಮೊಳಗಿಸಿದೆ.

ಸತತ 12 ಬಾರಿ ಗೆಲ್ಲುವ ಮೂಲಕ ಸೋಲಿಲ್ಲದ ಸರದಾರನನಾಗಿರುವ ಖರ್ಗೆ ಸೋಲಿಸುವುದು ಸುಲಭದ ಮಾತಲ್ಲ.  ಸಂಸತ್ತಿನಲ್ಲಿ ತಮ್ಮ ವಿರುದ್ಧ ಅನೇಕ ಬಾರಿ ಗುಡುಗಿರುವ ಖರ್ಗೆ ಅವರಿಗೆ ಸೋಲಿನ ರುಚಿ ಖುದ್ದು ಮೋದಿಯೇ ಆಸಕ್ತಿವಹಿಸಿದ್ದಾರೆ. ಕೈ​ ಪಾಳೆಯದ ದೊಡ್ಡ ನಾಯಕನನ್ನೇ ಗುರಿಯಾಗಿಸಿಕೊಳ್ಳುವ ಮೂಲಕ ಕಾಂಗ್ರೆಸ್​ಗೆ ಭೀತಿ ಹುಟ್ಟಿಸಲು ಮುಂದಾಗಿರುವ ಮೋದಿ ಇದಕ್ಕಾಗಿ ಕ್ಷೇತ್ರದ ಉಸ್ತುವಾರಿಯನ್ನು ಕೇಂದ್ರ ಸಚಿವ ರಾಜನಾಥ್​ ಸಿಂಗ್​ಗೆ ನೀಡಿದ್ದಾರೆ . ಗೃಹ ಸಚಿವರು ಕೂಡ ಯಾವುದೇ  ಅಬ್ಬರ ಮಾಡದೇ ಖರ್ಗೆ ವಿರುದ್ಧ ಕಾರ್ಯರೂಪಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿರುವ ಅವರ ವಿರೋಧಿಗಳ್ನು ಒಟ್ಟುಗೂಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ..

ಈ ಬಾರಿ ಸಂಸತ್ತಿನಲ್ಲಿ ಖರ್ಗೆಯ ಭಾಷಣ ಕೊನೆಯಾಗ ಬೇಕು. ಈ ಮೂಲಕ ಕಾಂಗ್ರೆಸ್​ಗೆ ಭಾರೀ ಹೊಡೆತ ನೀಡಬೇಕು ಎಂದು ಬಿಜೆಪಿ ಸಿದ್ಧತೆ ನಡೆಸಿದೆ. ಲೋಕಸಭಾ ಚುನಾವಣೆಗೆ ಖರ್ಗೆ ಕ್ಷೇತ್ರದಲ್ಲಿಯೇ ಬೃಹತ್​ ಸಮಾವೇಶ ಹಮ್ಮಿಕೊಂಡಿರುವ ಮೂಲಕ ಈಗಾಗಲೇ ಪರೋಕ್ಷವಾಗಿ ಖರ್ಗೆ ವಿರುದ್ಧ ಗುಡುಗಿದ್ದಾರೆ. ಖರ್ಗೆ ವಿರುದ್ಧ ಅನುಕಂಪದಂತಹ, ಯಾವುದೇ ಸೂತ್ರಗಳು ಫಲಿಸದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ.

ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿರುವ ನಾಯಕರಾದ ಬಾಬುರಾವ್​ ಚಿಂಚನಸೂರು, ಮಾಲೀಕಯ್ಯ ಗುತ್ತೇದಾರ್​ ಕೂಡ ಖರ್ಗೆ ಸೋಲಿಸಲು ಶಪಥಮಾಡಿದ್ದಾರೆ. ಈಗ ಉಮೇಶ್​ ಜಾಧವ್​ ನೇರವಾಗಿ ಖರ್ಗೆ ವಿರುದ್ಧ ಸೆಡ್ಡುಹೊಡೆಯಲು ಸಜ್ಜಾಗಿದ್ದಾರೆ. ಸ್ಥಳೀಯ ನಾಯಕರ ಜೊತೆಗೆ ರಾಷ್ಟ್ರೀಯ ನಾಯಕರು ಕೂಡ ಈಗ ಕೈ ಜೋಡಿಸಿದ್ದು, ಖರ್ಗೆ ಸೋಲಿಗೆ ಭಾರೀ ರಣತಂತ್ರವೇ ಹೂಡಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

3 minutes ago

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

11 minutes ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago