ಕಲಬುರಗಿ : ಸೋನಿಯಾ ಗಾಂಧಿ ಆತ್ಯಪ್ತರಾಗಿರುವ ಮಲ್ಲಿಕಾರ್ಜನ ಖರ್ಗ ಸೋಲಿಸಲು ಪಣತೊಟ್ಟಿದೆ. ಬಿಜೆಪಿ ಅಪರೇಷನ್ ಕಮಲ ಮಾಡುವ ಮೂಲಕ ಉಮೇಶ್ ಜಾಧವ್ ಅವರನ್ನೇ ಖರ್ಗೆ ವಿರುದ್ಧ ಕಣಕ್ಕೆ ಇಳಿಸಿರುವ ಬಿಜೆಪಿ ಸಿದ್ಧವಾಗಿದ್ದು, ಈ ಮೂಲಕ ಚುನಾವಣೆ ರಣಕಹಳೆ ಮೊಳಗಿಸಿದೆ.
ಸತತ 12 ಬಾರಿ ಗೆಲ್ಲುವ ಮೂಲಕ ಸೋಲಿಲ್ಲದ ಸರದಾರನನಾಗಿರುವ ಖರ್ಗೆ ಸೋಲಿಸುವುದು ಸುಲಭದ ಮಾತಲ್ಲ. ಸಂಸತ್ತಿನಲ್ಲಿ ತಮ್ಮ ವಿರುದ್ಧ ಅನೇಕ ಬಾರಿ ಗುಡುಗಿರುವ ಖರ್ಗೆ ಅವರಿಗೆ ಸೋಲಿನ ರುಚಿ ಖುದ್ದು ಮೋದಿಯೇ ಆಸಕ್ತಿವಹಿಸಿದ್ದಾರೆ. ಕೈ ಪಾಳೆಯದ ದೊಡ್ಡ ನಾಯಕನನ್ನೇ ಗುರಿಯಾಗಿಸಿಕೊಳ್ಳುವ ಮೂಲಕ ಕಾಂಗ್ರೆಸ್ಗೆ ಭೀತಿ ಹುಟ್ಟಿಸಲು ಮುಂದಾಗಿರುವ ಮೋದಿ ಇದಕ್ಕಾಗಿ ಕ್ಷೇತ್ರದ ಉಸ್ತುವಾರಿಯನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ಗೆ ನೀಡಿದ್ದಾರೆ . ಗೃಹ ಸಚಿವರು ಕೂಡ ಯಾವುದೇ ಅಬ್ಬರ ಮಾಡದೇ ಖರ್ಗೆ ವಿರುದ್ಧ ಕಾರ್ಯರೂಪಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿರುವ ಅವರ ವಿರೋಧಿಗಳ್ನು ಒಟ್ಟುಗೂಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ..
ಈ ಬಾರಿ ಸಂಸತ್ತಿನಲ್ಲಿ ಖರ್ಗೆಯ ಭಾಷಣ ಕೊನೆಯಾಗ ಬೇಕು. ಈ ಮೂಲಕ ಕಾಂಗ್ರೆಸ್ಗೆ ಭಾರೀ ಹೊಡೆತ ನೀಡಬೇಕು ಎಂದು ಬಿಜೆಪಿ ಸಿದ್ಧತೆ ನಡೆಸಿದೆ. ಲೋಕಸಭಾ ಚುನಾವಣೆಗೆ ಖರ್ಗೆ ಕ್ಷೇತ್ರದಲ್ಲಿಯೇ ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಮೂಲಕ ಈಗಾಗಲೇ ಪರೋಕ್ಷವಾಗಿ ಖರ್ಗೆ ವಿರುದ್ಧ ಗುಡುಗಿದ್ದಾರೆ. ಖರ್ಗೆ ವಿರುದ್ಧ ಅನುಕಂಪದಂತಹ, ಯಾವುದೇ ಸೂತ್ರಗಳು ಫಲಿಸದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ.
ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ನಾಯಕರಾದ ಬಾಬುರಾವ್ ಚಿಂಚನಸೂರು, ಮಾಲೀಕಯ್ಯ ಗುತ್ತೇದಾರ್ ಕೂಡ ಖರ್ಗೆ ಸೋಲಿಸಲು ಶಪಥಮಾಡಿದ್ದಾರೆ. ಈಗ ಉಮೇಶ್ ಜಾಧವ್ ನೇರವಾಗಿ ಖರ್ಗೆ ವಿರುದ್ಧ ಸೆಡ್ಡುಹೊಡೆಯಲು ಸಜ್ಜಾಗಿದ್ದಾರೆ. ಸ್ಥಳೀಯ ನಾಯಕರ ಜೊತೆಗೆ ರಾಷ್ಟ್ರೀಯ ನಾಯಕರು ಕೂಡ ಈಗ ಕೈ ಜೋಡಿಸಿದ್ದು, ಖರ್ಗೆ ಸೋಲಿಗೆ ಭಾರೀ ರಣತಂತ್ರವೇ ಹೂಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…