ಬೆಂಗಳೂರು: ನಟ ಪ್ರಕಾಶ್ ಚುನಾವಣೆಯ ಫಲಿತಾಂಶದ ಬಗ್ಗೆ ಟ್ವೀಟ್ ಮಾಡಿದ್ದು, ಇದು ನನಗಾಗಿರುವ ಕಪಾಳಮೋಕ್ಷ. ನನ್ನ ದಾರಿಯುದ್ದಕ್ಕೂ ಅನೇಕ ನಿಂದನೆ, ಟ್ರೋಲ್ ಮತ್ತು ಅವಮಾನವೇ ಹೆಚ್ಚಾಗಿದ್ದವು. ಆದರೂ ನನ್ನ ನಿಲುವಿಗೆ ನಾನು ಬದ್ಧನಾಗಿದ್ದೇನೆ. ಜಾತ್ಯತೀತ ಭಾರತಕ್ಕಾಗಿ ನನ್ನ ಹೋರಾಟವನ್ನು ನಿರಂತವಾಗಿ ಮುಂದುವರಿಸುತ್ತೇನೆ. ನನ್ನ ಕಷ್ಟಕರವಾದ ಪ್ರಯಣ ಈಗ ಪ್ರಾರಂವಾಗಿದೆ. ಈ ಲೋಕಸಭಾ ಚುನಾವಣೆಯ ಪಯಣದಲ್ಲಿ ನನ್ನ ಜೊತೆ ಇದ್ದು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಈ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ. ಮೊದಲಬಾರಿಗೆ ಅದೃಷ್ಟಪರೀಕ್ಷೆಗೆ ನಿಂತಿದ್ದ ನಟ ಪ್ರಕಾಶ್ ರಾಜ್ ಅವರಿಗೆ ತೀವ್ರ ನಿರಾಸೆಯಾಗಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದ ಪ್ರಕಾಶ್ ರಾಜ್ ಠೇವಣಿಯನ್ನು ಕಳೆದುಕೊಂಡಿದ್ದಾರೆ.
ಪಿ.ಸಿ ಮೋಹನ್ ಅವರು 6,02,877 ಮತಗಳನ್ನು ಪಡೆದಿದ್ದರೆ, ರಿಜ್ವಾನ್ ಅರ್ಷದ್ 5,32,160 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ 70,717 ಮತಗಳ ಅಂತರದಿಂದ ಮೋಹನ್ ಗೆಲವು ಸಾಧಿಸಿದ್ದಾರೆ. ಪ್ರಕಾಶ್ ರಾಜ್ 28,882 ಮತಗಳನ್ನು ಪಡೆದಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…