Featured

ಲೋಕಸಭಾ ಚುನಾವಣಾ ಸಿದ್ಧತೆಗಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ – vishwanews24

ಲೋಕಸಭಾ ಚುನಾವಣಾ ಸಿದ್ಧತೆಗಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ

ಟೀಕೆ-ಟಿಪ್ಪಣಿಗಳಿಗೆ ಅವಕಾಶ ಕೊಡದೆ ಪಕ್ಷವನ್ನು ಬಲಿಷ್ಠಗೊಳಿಸೋಣ : ಸೊರಕೆ

ಉಡುಪಿ : ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿ ಯಿಂದ ಎಲ್ಲಾ ಕಾಂಗ್ರೆಸ್ ನಾಯಕರು, ಕೆಪಿಸಿಸಿ ಸದಸ್ಯರು, ಎಲ್ಲಾ ಬ್ಲಾಕ್ ಅಧ್ಯಕ್ಷರು, ಎಲ್ಲಾ ಘಟಕಗಳ ಅಧ್ಯಕ್ಷರ ಸಭೆಯು ಕೋಟೇಶ್ವರದಲ್ಲಿರುವ ಸಹನಾ ಸೆಂಟರ್‌ನಲ್ಲಿ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಲೋಕಸಭಾ ಚುನಾವಣೆ, ಶಿಕ್ಷಕ ಕ್ಷೇತ್ರ, ಪದವೀಧರ ಕ್ಷೇತ್ರದ ಚುನಾವಣೆಯನ್ನು ಎದುರಿಸಲು ಪಕ್ಷ ಸಿದ್ಧವಾಗುವ ಕುರಿತು ವಿವರಿಸಿ, ಎಲ್ಲಾ ಸದಸ್ಯರ ಅಭಿಪ್ರಾಯಗಳನ್ನು ಅಪೇಕ್ಷಿಸಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ನಮ್ಮೊಳಗೆ ಒಗ್ಗಟ್ಟಿಲ್ಲದೇ ಇನ್ನೊಬ್ಬರ ಬಗ್ಗೆ ಮಾತನಾಡುವ ಅವಕಾಶ ನಮಗಿರುವುದಿಲ್ಲ. ಹೀಗಾಗಿ ನಮ್ಮ ನಡುವೆ ಇರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಟೀಕೆ-ಟಿಪ್ಪಣಿಗಳಿಗೆ ಅವಕಾಶ ಕೊಡದೆ ಪಕ್ಷವನ್ನು ಬಲಿಷ್ಠಗೊಳಿಸೋಣ ಎಂದರು.

ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಕೆ.ಕೆ. ಮಂಜುನಾಥ ಕುಮಾರ್ ಚುನಾವಣೆಗೆ ನಡೆಸಿರುವ ಸಿದ್ಧತೆಯ ಮಾಹಿತಿ ನೀಡಿದರು. ಶಿಕ್ಷಕರ ಸಮಸ್ಯೆಗಳಿಗೆ ನಾನು ಸ್ಪಂಧಿಸುತ್ತೇನೆ. ಗೆಲುವಿಗೆ ಎಲ್ಲರೂ ಪ್ರಯತ್ನಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೆ.ಕೆ.ಮಂಜುನಾಥ್‌ರನ್ನು ಗೌರವಿಸಲಾಯಿತು. ಸಭೆಯಲ್ಲಿ ಪಕ್ಷದ ನಾಯಕರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಸುರೇಂದ್ರ ಶೆಟ್ಟಿ, ಪ್ರಖ್ಯಾತ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಬಿಪಿನ್ ಚಂದ್ರಪಾಲ್, ಸದಾಶಿವ ದೇವಾಡಿಗ, ರಮೇಶ್ ಕಾಂಚನ್, ಹರಿಪ್ರಸಾದ್ ಶೆಟ್ಟಿ, ಶಂಕರ ಕುಂದರ್, ಅರವಿಂದ ಪೂಜಾರಿ, ದಿನಕರ ಹೇರೂರು, ಗೀತಾ ವಾಗ್ಳೆ, ಸೌರಭ್ ಬಲ್ಲಾಳ್, ಶಶಿಧರ ಶೆಟ್ಟಿ, ಇಸ್ಮಾಯಿಲ್ ಆತ್ರಾಡಿ, ತಿಮ್ಮ ಪೂಜಾರಿ, ಜಯಕುಮಾರ್, ಹರೀಶ್ ಕಿಣಿ, ಚಂದ್ರಶೇಖರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಸ್ವಾಗತಿಸಿ, ಜಿಲ್ಲಾ ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಕೆ.ಅಣ್ಣಯ್ಯ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಕುಶಲ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

18 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago