Featured

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೋರಾಟಕ್ಕೆ ಸಿದ್ದರಾಮಯ್ಯ ಶಕ್ತಿ ಅತಿಮುಖ್ಯ..

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯನವರು ಕೇವಲ ಮಾಜಿ ಮುಖ್ಯಮಂತ್ರಿಗಳು ಮಾತ್ರವಲ್ಲ. ಅವರು ಬೇರೆ ಮಾಜಿ ಮುಖ್ಯಮಂತ್ರಿಗಳಿಂದ ಭಿನ್ನ. ಪ್ರಸ್ತುತ ರಾಜಕಾರಣದಲ್ಲಿ ಕಾಂಗ್ರೆಸ್ ಗೆ ಅವರ ಅನಿವಾರ್ಯತೆ ಸಾಕಷ್ಟಿದೆ. ಪಕ್ಷದ ಅತಿ ದೊಡ್ಡ ನಿರ್ಧಾರ ಮಾಡುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಅವರೇ ಈಗ ಉಸ್ತುವಾರಿ.

ಸಿದ್ದರಾಮಯ್ಯನವರ ರಾಜಕೀಯ ಅನುಭವ, ಅವರ ಸಾಮೂಹಿಕ ವರ್ಚಸ್ಸು, ದಲಿತ ಸಮುದಾಯದವರ ನಾಯಕ ಎಂಬ ಹಣೆಪಟ್ಟಿ, ವಿಧಾನಸಭೆ ಚುನಾವಣೆಗೆ ಮುನ್ನ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದು, ಪ್ರಧಾನಿ ಮೋದಿ ವಿರುದ್ಧವೇ ರಾಜಕೀಯ ಹೋರಾಟ, ಮೂಲ ಕಾಂಗ್ಗೆಸ್ಸಿಗರಲ್ಲ ಎಂಬ ಇಮೇಜ್ ಇವೆಲ್ಲವೂ ಸಿದ್ದರಾಮಯ್ಯನವರಿಗೆ ವರವಾಗಿದ್ದು ಇದರ ಫಲವೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರನ್ನು ಹೈಕಮಾಂಡ್ ಮುಖ್ಯವಾಹಿನಿಗೆ ತರಲಿಚ್ಛಿಸುತ್ತಿರುವುದು.

ಸಿದ್ದರಾಮಯ್ಯನವರು ಮೂಲ ಕಾಂಗ್ರೆಸ್ಸಿಗ ಅಲ್ಲ, ಹೊರಗಿನಿಂದ ಬಂದವರು ಎಂಬ ಮಾತು ಅವರ ರಾಜಕೀಯ ಜೀವನದಲ್ಲಿ ಅವರಿಗೆ ಟಾಂಗ್ ನೀಡುತ್ತಲೇ ಇತ್ತು. ಆದರೆ ಅದೇ ಮಾತು ಅವರಿಗೀಗ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ವಿರುದ್ಧವಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದೇ ಹೇಳಲಾಗುತ್ತಿದೆ. ಕಾಂಗ್ರೆಸ್ಸೇತರ ಎಂಬ ಸಿದ್ದರಾಮಯ್ಯನವರ ಹಣೆಪಟ್ಟೆ ಅವರನ್ನು ಮುಂದಿನ ಚುನಾವಣೆಯಲ್ಲಿ ಇತರ ಬೇರೆ ಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿ ವಿರುದ್ಧ ಹೋರಾಡಲು ಪ್ರಮುಖ ಅಸ್ತ್ರ ಮಾಡಿಕೊಳ್ಳಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್ ಹೈಕಮಾಂಡ್ ನದ್ದು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿನ ರಾಜಕೀಯ ಹೋರಾಟ ಸಿದ್ದರಾಮಯ್ಯ ವರ್ಸಸ್ ಮೋದಿಯವರ ಮಧ್ಯೆ ಏರ್ಪಟ್ಟಂತೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೂಡ ಸಿದ್ದರಾಮಯ್ಯನವರನ್ನು ಮುಂದೆ ಇಟ್ಟುಕೊಂಡು ರಾಜಕೀಯ ಹೋರಾಟಕ್ಕೆ ಧುಮುಕುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದ್ದಂತಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಈ ಮಾತನ್ನು ಒಪ್ಪುತ್ತಾರೆ. ಎಲ್ಲಾ ಪಕ್ಷಗಳಲ್ಲಿಯೂ ಸಿದ್ದರಾಮಯ್ಯನವರಿಗೆ ಆಪ್ತರು ಇದ್ದಾರೆ. ತೃತೀಯ ರಂಗ ರಾಷ್ಟ್ರೀಯ ಮಟ್ಟದಲ್ಲಿ ರಚನೆಯಾದರೆ ಅಲ್ಲಿ ಸಿದ್ದರಾಮಯ್ಯನವರು ಪ್ರಮುಖ ಪಾತ್ರ ವಹಿಸುತ್ತಾರೆ ಎನ್ನುತ್ತಾರೆ.ಆದರೆ ಕೆಲವು ರಾಜಕೀಯ ವಿಶ್ಲೇಷಕರು ಈ ಮಾತನ್ನು ಒಪ್ಪುವುದಿಲ್ಲ. ಸಿದ್ದರಾಮಯ್ಯನವರಿಗೆ ಎಲ್ಲಾ ಪಕ್ಷಗಳಲ್ಲಿ ಆಪ್ತರು ಇದ್ದಾರೆ ನಿಜ, ಆದರೆ ಅವರು ಪಕ್ಷವನ್ನು ನಿರ್ಧರಿಸುವವರು ಆಗುತ್ತಾರೆಯೇ ಎಂದು ಕೇಳುತ್ತಾರೆ ರಾಜಕೀಯ ತಜ್ಞ ಡಾ ಸಂದೀಪ್ ಶಾಸ್ತ್ರಿ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸಿದ್ದರಾಮಯ್ಯನವರ ಸೇರ್ಪಡೆ ಕಾಂಗ್ರೆಸ್ ಗೆ ಕರ್ನಾಟಕ ಎಷ್ಟು ಅನಿವಾರ್ಯ ಎಂಬುದನ್ನು ತೋರಿಸುತ್ತದೆ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಹಿಂದುಳಿದ ನಾಯಕ ಸಿದ್ದರಾಮಯ್ಯನವರಿಗೆ ಸ್ಥಾನ ನೀಡಲಾಗುತ್ತಿದೆ. ಕಾಂಗ್ರೆಸ್ ಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿಯವರು ಮುಖ್ಯವಾಗುವುದಿಲ್ಲ. ಬಿಜೆಪಿ  ವಿರುದ್ಧ ಎಲ್ಲಾ ಪಕ್ಷಗಳ ಒಗ್ಗಟ್ಟನ್ನು ತೋರಿಸಲು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ವೇದಿಕೆಯಾಗಿತ್ತು.

ರಾಷ್ಟ್ರಮಟ್ಟದಲ್ಲಿ ಮಾಯಾವತಿ, ಲಾಲೂ ಪ್ರಸಾದ್ ಯಾದವ್, ಮುಲಾಯಂ ಸಿಂಗ್ ಯಾದವ್ ಮತ್ತು ಶರದ್ ಪವಾರ್ ಅವರ ಜೊತೆಗೆ ಸಿದ್ದರಾಮಯ್ಯನವರನ್ನು ದಲಿತ ಮುಖಂಡನಾಗಿ ಗುರುತಿಸಲು ಕಾಂಗ್ರೆಸ್ ಹೈಕಮಾಂಡ್ ಬಯಸಿದಂತಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

22 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago