Featured

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಜಯಗಳಿಸಲು ರಾಹುಲ್ ಗೆ ಪ್ರಧಾನಿ ಅಭ್ಯರ್ಥಿ ಘೋಷಣೆ ಇಲ್ಲ..

ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆ ಅಖಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂತು ಸೆಣಸುವ ಸಮರ್ಥ ಅಭ್ಯರ್ಥಿ ಪ್ರತಿಪಾಳಯದಲ್ಲಿ ಇಲ್ಲ ಎನ್ನುವ ದಟ್ಟ ಅಭಿಪ್ರಾಯದ ನಡುವೆಯೇ, ರಾಹುಲ್‌ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ಕಾಂಗ್ರೆಸ್‌ ನಿರಾಕರಿಸಿದೆ.

ಏಕಾಂಗಿಯಾಗಿ ಚುನಾವಣೆ ಎದುರಿಸಿ ಗೆಲ್ಲುವ ಕನಸನ್ನು ಎಂದೋ ಕೈಬಿಟ್ಟಿರುವ ಕಾಂಗ್ರೆಸ್‌, ಮಿತ್ರಪಕ್ಷಗಳನ್ನು ಒಗ್ಗೂಡಿಸಿ ಸೆಣಸುವ ಕನಸು ಕಾಣುತ್ತಿದೆ. ಆದರೆ ಆ ಪ್ರಯತ್ನ ಕೂಡ ಇದುವರೆಗೆ ನಿರೀಕ್ಷಿತ ಮಟ್ಟ ಮುಟ್ಟಿಲ್ಲ. ಇದರಿಂದ ಆತಂಕಗೊಂಡಿರುವ ಕಾಂಗ್ರೆಸ್‌, ಪ್ರಧಾನಿ ಪಟ್ಟದ ಗೊಡವೆಯಿಂದ ದೂರ ಉಳಿಯಲು ನಿರ್ಧರಿಸಿದೆ. 

ಸದ್ಯದ ಸ್ಥಿತಿಯಲ್ಲಿ ರಾಹುಲ್‌ ಗಾಂಧಿ ನಾಯಕತ್ವವೂ ಪಕ್ಷದೊಳಗೆ ಭರವಸೆ ಮೂಡಿಸುವಲ್ಲಿ ವಿಫಲವಾಗಿದೆ. ಮೋದಿ ಅಲೆಯ ಅಬ್ಬರ ಯಥಾಸ್ಥಿತಿ ಮುಂದುವರಿದಿರುವುದರಿಂದ ಪ್ರತಿಪಾಳಯದಲ್ಲಿ ಅವರಿಗೆ ತಕ್ಕ ಎದುರಾಳಿ ಬೇಕು. ರಾಹುಲ್‌ ಅವರಿಗೆ ಆ ವರ್ಚಸ್ಸು ಇಲ್ಲ ಎನ್ನುವುದು ಖುದ್ದು ಕಾಂಗ್ರೆಸ್‌ ನಾಯಕರೇ ಒಪ್ಪಿರುವ ವಾಸ್ತವ. ಈ ಬಗ್ಗೆ ಕೆಲವು ನಾಯಕರು ಪಕ್ಷದ ಕಾರ್ಯಕಾರಿಣಿ ಸಭೆ (ಸಿಡಬ್ಲ್ಯೂಸಿ)ಯಲ್ಲಿಯೇ ಸ್ಪಷ್ಟ ನಿರಾಕರಣೆ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘‘ನನಗೆ ಪ್ರಧಾನಿ ಪಟ್ಟದ ಆಸೆ ಇಲ್ಲ. ಮೈತ್ರಿಕೂಟದ ಸಮರ್ಥರೊಬ್ಬರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಒಪ್ಪಲು ನಾನು ಸಿದ್ಧ,’’ ಎಂದು ಖುದ್ದು ರಾಹುಲ್‌ ಅವರೇ ಕೆಲದಿನಗಳ ಹಿಂದೆ ಸ್ಪಷ್ಟಪಡಿಸಿದ್ದಾರೆ. 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

11 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago