ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆ ಅಖಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂತು ಸೆಣಸುವ ಸಮರ್ಥ ಅಭ್ಯರ್ಥಿ ಪ್ರತಿಪಾಳಯದಲ್ಲಿ ಇಲ್ಲ ಎನ್ನುವ ದಟ್ಟ ಅಭಿಪ್ರಾಯದ ನಡುವೆಯೇ, ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ಕಾಂಗ್ರೆಸ್ ನಿರಾಕರಿಸಿದೆ.
ಏಕಾಂಗಿಯಾಗಿ ಚುನಾವಣೆ ಎದುರಿಸಿ ಗೆಲ್ಲುವ ಕನಸನ್ನು ಎಂದೋ ಕೈಬಿಟ್ಟಿರುವ ಕಾಂಗ್ರೆಸ್, ಮಿತ್ರಪಕ್ಷಗಳನ್ನು ಒಗ್ಗೂಡಿಸಿ ಸೆಣಸುವ ಕನಸು ಕಾಣುತ್ತಿದೆ. ಆದರೆ ಆ ಪ್ರಯತ್ನ ಕೂಡ ಇದುವರೆಗೆ ನಿರೀಕ್ಷಿತ ಮಟ್ಟ ಮುಟ್ಟಿಲ್ಲ. ಇದರಿಂದ ಆತಂಕಗೊಂಡಿರುವ ಕಾಂಗ್ರೆಸ್, ಪ್ರಧಾನಿ ಪಟ್ಟದ ಗೊಡವೆಯಿಂದ ದೂರ ಉಳಿಯಲು ನಿರ್ಧರಿಸಿದೆ.
ಸದ್ಯದ ಸ್ಥಿತಿಯಲ್ಲಿ ರಾಹುಲ್ ಗಾಂಧಿ ನಾಯಕತ್ವವೂ ಪಕ್ಷದೊಳಗೆ ಭರವಸೆ ಮೂಡಿಸುವಲ್ಲಿ ವಿಫಲವಾಗಿದೆ. ಮೋದಿ ಅಲೆಯ ಅಬ್ಬರ ಯಥಾಸ್ಥಿತಿ ಮುಂದುವರಿದಿರುವುದರಿಂದ ಪ್ರತಿಪಾಳಯದಲ್ಲಿ ಅವರಿಗೆ ತಕ್ಕ ಎದುರಾಳಿ ಬೇಕು. ರಾಹುಲ್ ಅವರಿಗೆ ಆ ವರ್ಚಸ್ಸು ಇಲ್ಲ ಎನ್ನುವುದು ಖುದ್ದು ಕಾಂಗ್ರೆಸ್ ನಾಯಕರೇ ಒಪ್ಪಿರುವ ವಾಸ್ತವ. ಈ ಬಗ್ಗೆ ಕೆಲವು ನಾಯಕರು ಪಕ್ಷದ ಕಾರ್ಯಕಾರಿಣಿ ಸಭೆ (ಸಿಡಬ್ಲ್ಯೂಸಿ)ಯಲ್ಲಿಯೇ ಸ್ಪಷ್ಟ ನಿರಾಕರಣೆ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘‘ನನಗೆ ಪ್ರಧಾನಿ ಪಟ್ಟದ ಆಸೆ ಇಲ್ಲ. ಮೈತ್ರಿಕೂಟದ ಸಮರ್ಥರೊಬ್ಬರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಒಪ್ಪಲು ನಾನು ಸಿದ್ಧ,’’ ಎಂದು ಖುದ್ದು ರಾಹುಲ್ ಅವರೇ ಕೆಲದಿನಗಳ ಹಿಂದೆ ಸ್ಪಷ್ಟಪಡಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…