ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಯುಪಿಪಿ ಪಕ್ಷದಿಂದ ಸ್ಪರ್ಧೆ: ಉಪೇಂದ್ರ – Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಉತ್ತಮ ಪ್ರಜಾಕೀಯ ಪಕ್ಷದ (ಯುಪಿಪಿ) ಸಂಸ್ಥಾಪಕ ಚಿತ್ರನಟ ಉಪೇಂದ್ರ ಹೇಳಿದ್ದಾರೆ.

ಅವರು ಇಂದು ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡಿ,ಕಳೆದ ವಿಧಾನಸಭೆ ಚುನಾವಣೆಯಲ್ಲೇ ನಾವು ಸ್ಪರ್ಧಿಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಿಲ್ಲ. ಇದೀಗ ನಮ್ಮದೇ ಹೊಸ ಪಕ್ಷದಿಂದ ಸ್ಪರ್ಧೆ ಮಾಡುತ್ತೇವೆ. ನಾವು ಈ ಬಾರಿ ಐದು ವಿಚಾರಗಳಿಂದ ಚುನಾವಣೆಗೆ ಹೋಗುತ್ತಿದ್ದೇವೆ ಅಂತ ಹೇಳಿದರು.

ಪ್ರಜಾಕೀಯ ಪಕ್ಷ ವೈಯಕ್ತಿಕ ಸ್ವಾರ್ಥಕ್ಕಾಗಿ ಹುಟ್ಟಿಕೊಂಡಿರುವಂತ ಪಕ್ಷವಲ್ಲ. ಇದು ದೇಶದ ಮೇಲಿನ ಪ್ರೀತಿಯಿಂದ ಹುಟ್ಟಿಕೊಂಡಿದೆ. ಅದ್ಭುತ ಬದಲಾವಣೆಗೆ ಎಲ್ಲರೂ ಕೈ ಜೋಡಿಸಬೇಕು. ಈಗಾಗಲೇ 15 ರಿಂದ 18 ಕ್ಷೇತ್ರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಇನ್ನುಳಿದ ಅಭ್ಯರ್ಥಿಗಳನ್ನು ಕೆಲವೇ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದರು. ಜಾತಿ ವ್ಯವಸ್ಥೆ, ಹಣದ ಆಮಿಷದಿಂದ ಇಲ್ಲಿ ಯಾವುದೇ ಅಧಿಕಾರ ಪಡೆಯುವಂತ ಪ್ರಕ್ರಿಯೆ ನಡೆಯುವುದಿಲ್ಲ ಅವರು ಮಾಹಿತಿ ನೀಡಿದರು.

ಈಗಾಗಲೇ 15 ರಿಂದ 18 ಕ್ಷೇತ್ರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಇನ್ನುಳಿದ ಅಭ್ಯರ್ಥಿಗಳನ್ನು ಕೆಲವೇ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದರು. ಜಾತಿ ವ್ಯವಸ್ಥೆ, ಹಣದ ಆಮಿಷದಿಂದ ಇಲ್ಲಿ ಯಾವುದೇ ಅಧಿಕಾರ ಪಡೆಯುವಂತ ಪ್ರಕ್ರಿಯೆ ನಡೆಯುವುದಿಲ್ಲ ಅವರು ಮಾಹಿತಿ ನೀಡಿದರು.