Featured

ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ನಾವೆಂದೂ ಹೇಳಿಕೊಂಡಿಲ್ಲ.: ಪಿ. ಚಿದಂಬರಂ

ಚೆನ್ನೈ, : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ರಾಹುಲ್ ಗಾಂಧಿ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ ಎಂದು ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕರೂ ಆಗಿರುವ ಪಿ ಚಿದಂಬರಂ ಹೇಳಿದ್ದಾರೆ.

ಮುಂದಿನ ವರ್ಷ ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದಕ್ಕೆ ಮಿಶ್ರ ಹಾಗೂ ಋಣಾತ್ಮಕ ಪ್ರತಿಕ್ರಿಯೆ ಹಲವು ಸಮಾನ ಮನಸ್ಕ ಮೈತ್ರಿ ಪಕ್ಷಗಳಿಂದ ನಮಗೆ ಬಂದಿವೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ನಾವೆಂದೂ ಹೇಳಿಕೊಂಡಿಲ್ಲ. ಕೆಲವು ಕಾಂಗ್ರೆಸ್ ನಾಯಕರು ಈ ಬಗ್ಗೆ ಮಾತನಾಡುವಾಗ ಎಐಸಿಸಿ ಮಧ್ಯೆ ಪ್ರವೇಶಿಸಿ ಅಂತಹ ಹೇಳಿಕೆ ನೀಡುವುದು ನಿಲ್ಲಿಸುವಂತೆ ಸೂಚಿಸಿತ್ತು. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು, ಅದನ್ನು ಅಧಿಕಾರದಿಂದ ಹೊರಗಿಡುವುದು ನಮ್ಮ ಬಯಕೆಯಾಗಿದೆ. ಎನ್ ಡಿಎ ಜಾಗದಲ್ಲಿ ಜನಪರವಾದ, ವ್ಯಕ್ತಿಗಳಿಗೆ ಸ್ವಾತಂತ್ರ್ಯ ನೀಡುವ, ಪ್ರಗತಿಪರ ಸರ್ಕಾರವನ್ನು ನೋಡುವುದು ನಮ್ಮ ಆಸೆಯಾಗಿದೆ. ತೆರಿಗೆ ಭಯೋತ್ಪಾದನೆಯಂತಹ ವಾತಾವರಣವನ್ನು ಸೃಷ್ಟಿಸುವ ಸರ್ಕಾರ ನಮಗೆ ಬೇಡ. ಮಹಿಳೆಯರು, ಮಕ್ಕಳಿಗೆ ರಕ್ಷಣೆ ನೀಡುವ ರೈತರನ್ನು ಬೆಳೆಸುವ ಸರ್ಕಾರ ಬೇಕು ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಜೊತೆ ಸ್ಥಳೀಯ ಪಕ್ಷಗಳು ಮೈತ್ರಿ ಮಾಡಿಕೊಳ್ಳದಂತೆ ನರೇಂದ್ರ ಮೋದಿ ಸರ್ಕಾರ ಬೆದರಿಕೆ ತಂತ್ರಗಳನ್ನು ಅಳವಡಿಸಿಕೊಳ್ಳುತ್ತಿದೆ ಎಂದು ಇದೇ ಸಂದರ್ಭದಲ್ಲಿ  ಆಪಾದಿಸಿದ್ದಾರೆ. ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ. ಮೈತ್ರಿ ಮಾಡಿಕೊಂಡು ಚುನಾವಣೆ ನಂತರ ಪ್ರಧಾನ ಮಂತ್ರಿ ಯಾರಾಗಬೇಕು ಎಂದು ಎಲ್ಲಾ ಪಕ್ಷಗಳು ಒಟ್ಟಾಗಿ ಕುಳಿತು ಚರ್ಚೆ ಮಾಡಿ ನಿರ್ಧರಿಸಲಿದೆ ಎಂದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago