Featured

ಲೋಕಸಭಾ ಚುನಾವಣೆಯಲ್ಲಿ ಶ್ರಮಪಟ್ಟು ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ : ಆರ್. ಅಶೋಕ್ ಗೆ ಅಮಿತ್ ಶಾ ಅಭಿನಂದನಾ ಪತ್ರ -Vishwanews24

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಅವರು ಪಕ್ಷದವತಿಯಿಂದ ಗೌರವ ಅಭಿನಂದನೆ ಪತ್ರವನ್ನು ಬಿಜೆಪಿ. ನಾಯಕ ಆರ್. ಅಶೋಕ ಅವರನ್ನು ಉದ್ದೇಶಿಸಿ ಬರೆದಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಬಿಜೆಪಿ ಅಭೂತಪೂರ್ವ ಗೆಲುವು ಪಡೆದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಲೋಕಸಭಾ ಚುನಾವಣೆಯಲ್ಲಿ ಶ್ರಮಪಟ್ಟು ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ ಎಂದು ಕೊಂಡಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ದೊರೆತು 303 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ. ಚುನಾವಣೆ ಕಾರ್ಯದಲ್ಲಿ ನಮ್ಮ ಅಳಿಲು ಸೇವೆಯನ್ನು ಶ್ಲಾಘಿಸಿ ಪಕ್ಷದ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ ಅವರು ನಮಗೆ ಅಭಿನಂದನಾ ಪತ್ರ ಕಳುಹಿಸಿರುವುದು ಹರ್ಷ ತಂದಿದೆ.

ಈ ಅಭಿನಂದನೆ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸಲ್ಲತಕ್ಕದ್ದು ಅಲ್ಲದೇ ರಾಜ್ಯದಲ್ಲೂ ಕೂಡ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಬೆನ್ನಲ್ಲೆ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಸಂಘಟನೆ, ಕಾರ್ಯ ವೈಖರಿಯಿಂದಲೇ 2014ರ ಲೋಕಸಭಾ ಚುನಾವಣೆಗಿಂತ ಹೆಚ್ಚು ಸ್ಥಾನ ಗೆಲ್ಲಲು ಸಹಾಯಕವಾಗಿದೆ. ಮುಂದಿನ ದಿನಗಳಲ್ಲೂ ಕೂಡ ಇದೇ ರೀತಿ ಪಕ್ಷ ಸಂಘಟನೆ ಮಾಡಬೇಕೆಂದು ಅಮಿತ್ ಶಾ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಸದ್ಯ ಈ ಪತ್ರಕ್ಕೆ ಸಂಭ್ರಮ ವ್ಯಕ್ತಪಡಿಸಿರುವ ಆರ್.ಅಶೋಕ್ ಅವರು, ಅಮಿತ್ ಶಾ ಹೇಳಿರುವ ಅಭಿನಂದನೆ ಲಕ್ಷಾಂತರ ಕಾರ್ಯಕರ್ತರಿಗೆ ಸಲ್ಲತಕ್ಕದ್ದು ಎಂದು ಪ್ರತಿಕ್ರಿಯೆ ನೀಡಿದ್ದು ಈ ವಿಷಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago