ದಕ್ಷಿಣ ಕನ್ನಡ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿರುವ ರಮಾನಾಥ ರೈ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವ, ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕ ಬೆಳ್ಳಿಪ್ಪಾಡಿ ರಮಾನಾಥ ರೈ ಇದೀಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಬಹುತೇಕ ವಿಶ್ರಾಂತ ಜೀವನ ನಡೆಸುತ್ತಿರುವ ರಮಾನಾಥ ರೈ ಇದೀಗ ಮತ್ತೆ ರಾಜಕೀಯದಲ್ಲಿ ಸಕ್ರಿಯರಾಗುವ ಮುನ್ಸೂಚನೆ ನೀಡುತ್ತಿದ್ದಾರೆ.ಮುಂಜಾನೆ ಸರ್ಕ್ಯೂಟ್ ಹೌಸ್ ನಲ್ಲಿ ಬೀಡುಬಿಟ್ಟು ಮುಂಬರುವ ಲೋಕಸಭಾ ಚುನಾವಣೆಗೆ ತಂತ್ರಗಾರಿಕೆ ರೂಪಿಸುತ್ತಿದ್ದಾರೆ.ಕೆಲ ದಿನಗಳ ಹಿಂದೆಯಷ್ಟೇ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ರಮಾನಾಥ ರೈ ಅವರು ನಾನು ಕೂಡ ಟಿಕೆಟ್ ಆಕಾಂಕ್ಷಿ ಎಂಬ ಸ್ಪಷ್ಟ ಸಂದೇಶವನ್ನು ರವಾನೆ ಮಾಡಿದ್ದಾರೆ.

ಮಂಗಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಹುಡುಕಾಟದಲ್ಲಿರುವ ಹೈಕಮಾಂಡಿಗೆ ಸೂಕ್ತ ಅಭ್ಯರ್ಥಿಯಾಗಿ ಕಂಡಿರುವುದು ಮಾಜಿ ಸಚಿವ ರಮಾನಾಥ ರೈ ಮಾತ್ರ. ಈ ಹಿಂದೆ ಕಣಕ್ಕಿಳಿದಿದ್ದ ಜನಾರ್ದನ ಪೂಜಾರಿ ನಳಿನ್ ಕುಮಾರ್ ವಿರುದ್ಧ ಭಾರೀ ಮತಗಳ ಅಂತರದಲ್ಲಿ ಸೋಲು ಕಂಡಿದ್ದರಿಂದ ಮತ್ತೆ ಗೆಲುವನ್ನು ತಮ್ಮದಾಗಿಸಿಕೊಳ್ಳುವ ಅಜೆಂಡಾ ಹಾಕಿರುವ ಕಾಂಗ್ರೆಸ್ ಪಕ್ಷ ರಮಾನಾಥ ರೈಯತ್ತ ಒಲವು ತೋರಿಸಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಕೋಟೆಯನ್ನು ಒಡೆದು ಕಾಂಗ್ರೆಸ್ ತನ್ನ ಝಂಡಾ ಊರಲು ಸಿದ್ಧತೆ ನಡೆಸಿದೆ. 1991ರಿಂದ ಅದು ಸಾಧ್ಯವಾಗಿಲ್ಲ. 1977ರಿಂದ 1989ರವರೆಗೆ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿ ಜನಾರ್ದನ ಪೂಜಾರಿ ಸತತವಾಗಿ ಜಯ ಗಳಿಸಿ ಕಾಂಗ್ರೆಸ್ಸಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭದ್ರ ಬುನಾದಿ ಹಾಕಿದ್ದರು. 1991ರ ಬಳಿಕ ಕಾಂಗ್ರೆಸ್ಸಿಗೆ ಸತತ ಸೋಲು. 1991ರ ಬಳಿಕ ಹಿಂದುತ್ವದ ಅಲೆಯಿಂದ ಚಿತ್ರಣವೇ ಬದಲಾಯಿತು. 1991ರ ಬಳಿಕ ಈ ಕ್ಷೇತ್ರ ಬಿಜೆಪಿ ವಶವಾಯಿತು.

ಮತ್ತೆ ಕಾಂಗ್ರೆಸ್ ವಯೋಸಹಜ ವೃದ್ಧಾಪ್ಯದಿಂದ ಬಳಲುತ್ತಿರುವ ಜನಾರ್ದನ ಪೂಜಾರಿಯವರಿಗೆ ಟಿಕೆಟ್ ನೀಡುವುದು ಕಷ್ಟ ಸಾಧ್ಯವಾಗಿರುವುದರಿಂದ ಸಹಜವಾಗಿಯೇ ರಮಾನಾಥ ರೈ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಇವರಲ್ಲದೇ ಇನ್ನೂ ಹಲವು ಮಂದಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದಾರೆ.ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಯುವ ನಾಯಕ ಮಿಥುನ್ ರೈ, ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕೂಡಾ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ರಮಾನಾಥ ರೈ ಬಹಿರಂಗವಾಗಿಯೇ ತಾವು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಪಕ್ಷ ಈಗಾಗಲೇ ಪಾರ್ಲಿಮೆಂಟ್ ಚುನಾವಣೆಗೆ ಸಿದ್ಧವಾಗುತ್ತಿದ್ದು ಟಿಕೆಟ್ ನೀಡಿದರೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಆದರೆ ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆ ಅನ್ನೊದನ್ನು ಕಾದು ನೋಡಬೇಕಾಗಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

28 minutes ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

37 minutes ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

21 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

23 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

23 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

23 hours ago