ದಕ್ಷಿಣ ಕನ್ನಡ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿರುವ ರಮಾನಾಥ ರೈ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವ, ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕ ಬೆಳ್ಳಿಪ್ಪಾಡಿ ರಮಾನಾಥ ರೈ ಇದೀಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಬಹುತೇಕ ವಿಶ್ರಾಂತ ಜೀವನ ನಡೆಸುತ್ತಿರುವ ರಮಾನಾಥ ರೈ ಇದೀಗ ಮತ್ತೆ ರಾಜಕೀಯದಲ್ಲಿ ಸಕ್ರಿಯರಾಗುವ ಮುನ್ಸೂಚನೆ ನೀಡುತ್ತಿದ್ದಾರೆ.ಮುಂಜಾನೆ ಸರ್ಕ್ಯೂಟ್ ಹೌಸ್ ನಲ್ಲಿ ಬೀಡುಬಿಟ್ಟು ಮುಂಬರುವ ಲೋಕಸಭಾ ಚುನಾವಣೆಗೆ ತಂತ್ರಗಾರಿಕೆ ರೂಪಿಸುತ್ತಿದ್ದಾರೆ.ಕೆಲ ದಿನಗಳ ಹಿಂದೆಯಷ್ಟೇ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ರಮಾನಾಥ ರೈ ಅವರು ನಾನು ಕೂಡ ಟಿಕೆಟ್ ಆಕಾಂಕ್ಷಿ ಎಂಬ ಸ್ಪಷ್ಟ ಸಂದೇಶವನ್ನು ರವಾನೆ ಮಾಡಿದ್ದಾರೆ.

ಮಂಗಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಹುಡುಕಾಟದಲ್ಲಿರುವ ಹೈಕಮಾಂಡಿಗೆ ಸೂಕ್ತ ಅಭ್ಯರ್ಥಿಯಾಗಿ ಕಂಡಿರುವುದು ಮಾಜಿ ಸಚಿವ ರಮಾನಾಥ ರೈ ಮಾತ್ರ. ಈ ಹಿಂದೆ ಕಣಕ್ಕಿಳಿದಿದ್ದ ಜನಾರ್ದನ ಪೂಜಾರಿ ನಳಿನ್ ಕುಮಾರ್ ವಿರುದ್ಧ ಭಾರೀ ಮತಗಳ ಅಂತರದಲ್ಲಿ ಸೋಲು ಕಂಡಿದ್ದರಿಂದ ಮತ್ತೆ ಗೆಲುವನ್ನು ತಮ್ಮದಾಗಿಸಿಕೊಳ್ಳುವ ಅಜೆಂಡಾ ಹಾಕಿರುವ ಕಾಂಗ್ರೆಸ್ ಪಕ್ಷ ರಮಾನಾಥ ರೈಯತ್ತ ಒಲವು ತೋರಿಸಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಕೋಟೆಯನ್ನು ಒಡೆದು ಕಾಂಗ್ರೆಸ್ ತನ್ನ ಝಂಡಾ ಊರಲು ಸಿದ್ಧತೆ ನಡೆಸಿದೆ. 1991ರಿಂದ ಅದು ಸಾಧ್ಯವಾಗಿಲ್ಲ. 1977ರಿಂದ 1989ರವರೆಗೆ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿ ಜನಾರ್ದನ ಪೂಜಾರಿ ಸತತವಾಗಿ ಜಯ ಗಳಿಸಿ ಕಾಂಗ್ರೆಸ್ಸಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭದ್ರ ಬುನಾದಿ ಹಾಕಿದ್ದರು. 1991ರ ಬಳಿಕ ಕಾಂಗ್ರೆಸ್ಸಿಗೆ ಸತತ ಸೋಲು. 1991ರ ಬಳಿಕ ಹಿಂದುತ್ವದ ಅಲೆಯಿಂದ ಚಿತ್ರಣವೇ ಬದಲಾಯಿತು. 1991ರ ಬಳಿಕ ಈ ಕ್ಷೇತ್ರ ಬಿಜೆಪಿ ವಶವಾಯಿತು.

ಮತ್ತೆ ಕಾಂಗ್ರೆಸ್ ವಯೋಸಹಜ ವೃದ್ಧಾಪ್ಯದಿಂದ ಬಳಲುತ್ತಿರುವ ಜನಾರ್ದನ ಪೂಜಾರಿಯವರಿಗೆ ಟಿಕೆಟ್ ನೀಡುವುದು ಕಷ್ಟ ಸಾಧ್ಯವಾಗಿರುವುದರಿಂದ ಸಹಜವಾಗಿಯೇ ರಮಾನಾಥ ರೈ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಇವರಲ್ಲದೇ ಇನ್ನೂ ಹಲವು ಮಂದಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದಾರೆ.ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಯುವ ನಾಯಕ ಮಿಥುನ್ ರೈ, ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕೂಡಾ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ರಮಾನಾಥ ರೈ ಬಹಿರಂಗವಾಗಿಯೇ ತಾವು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಪಕ್ಷ ಈಗಾಗಲೇ ಪಾರ್ಲಿಮೆಂಟ್ ಚುನಾವಣೆಗೆ ಸಿದ್ಧವಾಗುತ್ತಿದ್ದು ಟಿಕೆಟ್ ನೀಡಿದರೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಆದರೆ ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆ ಅನ್ನೊದನ್ನು ಕಾದು ನೋಡಬೇಕಾಗಿದೆ.

Vishwa News 24

Recent Posts

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ -vishwanews24

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…

4 hours ago

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…

4 hours ago

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

9 hours ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

9 hours ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

9 hours ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

10 hours ago