ಬೆಂಗಳೂರು : ದಕ್ಷಿಣ ಭಾರತದ ಹೆಸರಾಂತ ನಟ, ಕನ್ನಡಿಗ ಪ್ರಕಾಶ್ ರೈ ರಾಜಕೀಯ ಪ್ರವೇಶಿಲು ನಿರ್ಧರಿಸಿದ್ದಾರೆ. 2019 ನೇ ಲೋಕಸಭಾ ಚುನಾವಣೆಯ ಕಣಕ್ಕೆ ತಾವು ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದಾರೆ.
ಸೋಮವಾರದ ಮಧ್ಯರಾತ್ರಿ ಟ್ವೀಟ್ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿ, ಚುನಾವಣೆಗೆ ಸ್ವರ್ಧಿಸುವ ವಿಚಾರವನ್ನು ತಿಳಿಸಿದ್ದಾರೆ.
“ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ಆರಂಭ… ಹೊಸ ಜವಾಬ್ದಾರಿ… ನಿಮ್ಮೆಲ್ಲರ ಸಹಕಾರದೊಂದಿಗೆ ನಾನು ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನ ಕೈಗೊಂಡಿದ್ದೇನೆ. ಆಬ್ ಕಿ ಬಾರ್ ಜನತಾ ಕಿ ಸರ್ಕಾರ್#ಸಿಟಿಜನ್ ವಾಯ್ಸ್ #ಜಸ್ಟ್ ಆಸ್ಕಿಂಗ್ ” ’ ಎಂದು ಟ್ವಿಟರ್ ನಲ್ಲಿ ಬರೆದಿದ್ದಾರೆ.
ಯಾವ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬುದರ ಬಗ್ಗೆಯೂ ಹೇಳಿದ್ದಾರೆ. ಚುನಾವಣೆಗೆ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ, ಕ್ಷೇತ್ರದ ಬಗ್ಗೆ ಅವರಿನ್ನೂ ಖಚಿತ ನಿರ್ಧಾರಕ್ಕೆ ಬಂದಂತಿಲ್ಲ. “ಕ್ಷೇತ್ರ ಯಾವುದು ಎಂಬುದನ್ನು ಮುಂಬರುವ ದಿನಗಳಲ್ಲಿ ತಿಳಿಸುತ್ತೇನೆ,” ಎಂದು ಅವರು ಬರೆದುಕೊಂಡಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…