ಬೆಂಗಳೂರು : ದಕ್ಷಿಣ ಭಾರತದ ಹೆಸರಾಂತ ನಟ, ಕನ್ನಡಿಗ ಪ್ರಕಾಶ್ ರೈ ರಾಜಕೀಯ ಪ್ರವೇಶಿಲು ನಿರ್ಧರಿಸಿದ್ದಾರೆ. 2019 ನೇ ಲೋಕಸಭಾ ಚುನಾವಣೆಯ ಕಣಕ್ಕೆ ತಾವು ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದಾರೆ.
ಸೋಮವಾರದ ಮಧ್ಯರಾತ್ರಿ ಟ್ವೀಟ್ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿ, ಚುನಾವಣೆಗೆ ಸ್ವರ್ಧಿಸುವ ವಿಚಾರವನ್ನು ತಿಳಿಸಿದ್ದಾರೆ.
“ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ಆರಂಭ… ಹೊಸ ಜವಾಬ್ದಾರಿ… ನಿಮ್ಮೆಲ್ಲರ ಸಹಕಾರದೊಂದಿಗೆ ನಾನು ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನ ಕೈಗೊಂಡಿದ್ದೇನೆ. ಆಬ್ ಕಿ ಬಾರ್ ಜನತಾ ಕಿ ಸರ್ಕಾರ್#ಸಿಟಿಜನ್ ವಾಯ್ಸ್ #ಜಸ್ಟ್ ಆಸ್ಕಿಂಗ್ ” ’ ಎಂದು ಟ್ವಿಟರ್ ನಲ್ಲಿ ಬರೆದಿದ್ದಾರೆ.
ಯಾವ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬುದರ ಬಗ್ಗೆಯೂ ಹೇಳಿದ್ದಾರೆ. ಚುನಾವಣೆಗೆ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ, ಕ್ಷೇತ್ರದ ಬಗ್ಗೆ ಅವರಿನ್ನೂ ಖಚಿತ ನಿರ್ಧಾರಕ್ಕೆ ಬಂದಂತಿಲ್ಲ. “ಕ್ಷೇತ್ರ ಯಾವುದು ಎಂಬುದನ್ನು ಮುಂಬರುವ ದಿನಗಳಲ್ಲಿ ತಿಳಿಸುತ್ತೇನೆ,” ಎಂದು ಅವರು ಬರೆದುಕೊಂಡಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…