ಲಕ್ನೋ: ಮುಂಬರುವ ಲೋಕಸಭಾ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣ ಮಾಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಸೋಮವಾರ ಅಯೋಧ್ಯೆಯಲ್ಲಿ ನಡೆದ `ಸಂತ ಸಮ್ಮೇಳನದಲ್ಲಿ’ ಪಾಲ್ಗೊಂಡ ಅವರು, 2019ರ ಲೋಕಸಭಾ ಚುನಾವಣೆಯೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತದೆ. ನಾವು ಪ್ರಪಂಚದಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ನ್ಯಾಯಾಂಗ, ಶಾಸಕಾಂಗ ತಮ್ಮದೇ ಆದ ಅಧಿಕಾರವನ್ನು ಹೊಂದಿವೆ. ಆದ್ದರಿಂದ ಇವುಗಳನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ. ಸಾಧು-ಸಂತರು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಡಿ ಎಂದು ಹೇಳಿದ್ದಾರೆ.
ಮರ್ಯಾದಾ ಪುರುಷೋತ್ತಮ ಶ್ರೀರಾಮ ಬ್ರಹ್ಮಾಂಡದ ಒಡೆಯನಾಗಿದ್ದಾನೆ. ಅವನ ದಯೆಯಿಂದ ಅಯೋಧ್ಯೆಯಲ್ಲಿ ರಾಮಮಂದಿರ ಶತಸಿದ್ಧ. ಇದರ ಬಗ್ಗೆ ಯಾವುದೇ ಗೊಂದಲವಿಲ್ಲ. ಈ ಬಗ್ಗೆ ಸಾಧು-ಸಂತರಲ್ಲಿ ಅನುಮಾನವಿದ್ದು, ಪ್ರಪಂಚವು ಆಶಾವಾದದ ಮೇಲೆ ನಿಂತಿದೆ. ಆದ್ದರಿಂದ ಎಲ್ಲರೂ ಸ್ವಲ್ಪ ಸಮಯದವರೆಗೆ ತಾಳ್ಮೆ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಬಿಜೆಪಿಯ ಮಾಜಿ ಸಂಸದ ರಾಮ್ ವಿಲಾಸ್ ವೆಂದಾತಿಯವರು ಹೇಳಿದ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಮೊಗಲ್ ಚಕ್ರವರ್ತಿ ಬಾಬರನು ಯಾವುದೇ ಹಿಂದೂ ದೇವಾಲಯಗಳನ್ನು ಕೆಡವಲು ಯಾವ ನ್ಯಾಯಾಲಯಗಳ ಅಪ್ಪಣೆ ಕೇಳಿದ್ದಿಲ್ಲ. ಹೀಗಾಗಿ ನ್ಯಾಯಾಲಯದ ಅಪ್ಪಣೆ ಕೇಳದೆ 1992ರಲ್ಲಿ ಬಾಬ್ರಿ ಮಸೀದಿಯನ್ನು ಒಡೆದು ಹಾಕಲಾಗಿದೆ. ಅಲ್ಲದೇ ಸ್ಥಳದಲ್ಲಿ ಸಿಕ್ಕ ರಾಮನ ಮೂರ್ತಿಯಿಂದ ಪ್ರೇರೇಪಣೆಗೊಂಡು ಒಂದೇ ದಿನದಲ್ಲಿ ದೇವಾಲಯ ನಿರ್ಮಾಣಕ್ಕೆ ಮುಂದಾದ ವಿಚಾರವನ್ನು ಪ್ರಸ್ತಾಪಿಸಿದ್ರು.
ಇದೇ ವೇಳೆ ವಿಶ್ವ ಹಿಂದೂ ಪರಿಷತ್ ರಾಮ ಮಂದಿರ ನಿರ್ಮಾಣ ಕುರಿತು ಪ್ರಸ್ತಾಪಿಸಿ, ಮುಂದಿನ ಮೂರ್ನಾಲ್ಕು ತಿಂಗಳುಗಳಲ್ಲಿ ರಾಮ ಮಂದಿರ ವಿಚಾರವಾಗಿ ಸುಪ್ರೀಂ ಕೋರ್ಟ್ ಯಾವುದೇ ತೀರ್ಮಾನ ತೆಗೆದುಕೊಳ್ಳದಿದ್ದರೆ, ಭವಿಷ್ಯದ ಉಳಿವಿಗಾಗಿ ಮತ್ತೊಮ್ಮೆ ರಾಮಮಂದಿರ ನಿರ್ಮಾಣ ಚಳುವಳಿಯನ್ನು ಪ್ರಾರಂಭಿಸಬೇಕೆಂದು ಸಾಧು-ಸಂತರಿಗೆ ಕರೆ ನೀಡಿದ್ರು. ಇದೇ ಗುರುವಾರ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಮುಂದುವರೆಯಲಿದೆ. ಈ ಮೊದಲು ನಡೆದ ವಿಚಾರಣೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಶಂಕೆ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರುಗಳಾದ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಹಾಗೂ ಇನ್ನೂ ಅನೇಕ ಮುಖಂಡರನ್ನು ಕೋರ್ಟ್ ವಿಚಾರಣೆ ನಡೆಸಿತ್ತು.
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…