ಲೋಕಸಭಾ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ತಯಾರಿ ಆರಂಭಿಸಿದೆ. ದೇಶದ ಅಧಿಕೃತ ರಾಜಕೀಯ ಪಕ್ಷಗಳ ಸಭೆ ನಡೆಸಿ ಪಕ್ಷಗಳ ಅಹವಾಲು ಆಲಿಸಿದೆ. ಇದರ ಜೊತೆಗೆ ರಾಜಕೀಯ ಪಕ್ಷಗಳೂ ಕೂಡ ತನ್ನದೇ ಆದ ತಂತ್ರಗಾರಿಕೆ ಮತ ಬ್ಯಾಂಕ್ ವೃದ್ಧಿ ಸೇರಿದಂತೆ ಸಾಕಷ್ಟು ಕೆಲಸಗಳನ್ನು ಮಾಡಿಕೊಳ್ಳುತ್ತಿವೆ. ಇದೀಗ ಬಿಜೆಪಿ ಗೆಲುವಿಗೆ ಸಹಕಾರಿಯಾಗಲು ರಾಷ್ಟ್ರೀಯ ಸ್ವಯಂ ಸೇವ ಸಂಘ ಅಣಿಯಾಗಿದೆ. ಮತ್ತೆ ಬಿಜೆಪಿ ನೇತೃತ್ವದಲ್ಲಿ ಅಧಿಕಾರ ಹಿಡಿಯಲು ಆರ್ಎಸ್ಎಸ್ ತಂತ್ರಗಾರಿಕೆ ರೂಪಿಸಲು ಮುಂದಾಗಿದೆ.
ಮೂರು ದಿನಗಳ ಕಾಲ ರಾಯಚೂರಿನಲ್ಲಿ ಆರ್ಎಸ್ಎಸ್ ಬೈಠಕ್ ಹಾಗೂ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಬಳಿಕ ಎರಡು ದಿನ ಮಂತ್ರಾಲಯದಲ್ಲಿ ಆರ್ಎಸ್ಎದ್ ಬೈಠಕ್ ನಡೆಯಲಿದೆ. ಈಗಾಗಲೇ ರಾಯಚೂರಿಗೆ ಆಗಮಿಸಿರುವ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಲೆಕ್ಕಾಚಾರ ಶುರು ಮಾಡಿದ್ದಾರೆ.
ಸೆಪ್ಟೆಂಬರ್ 1 ರಿಂದ ಮಂತ್ರಾಲಯದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಆರ್ಎಸ್ಎಸ್ ಬೈಠಕ್ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಭಾಗಿಯಾಗಲಿದ್ದು, ಬಿಜೆಪಿ ಮತಬ್ಯಾಂಕ್ ಸ್ಟ್ರಾಂಗ್ ಮಾಡುವ ಬಗ್ಗೆ ಸ್ವಯಂ ಸೇವಕರ ಜೊತೆ ಚರ್ಚಿಸಲಿದ್ದಾರೆ. ಮಂತ್ರಾಲಯದ ತಿರುಮಲ ವಸತಿ ಗೃಹದಲ್ಲಿ ನಡೆಯಲಿರುವ ಬೈಠಕ್ನಲ್ಲಿ ಸುಮಾರು 300 ಜನ ವಿವಿಧ ಹಿಂದು ಪರ ಸಂಘಟನೆಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಸಂಘ ಪರಿವಾರದ ಅಭಿವೃದ್ಧಿ ಕೆಲಸಗಳು ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಾಡಬೇಕಿರುವ ಯೋಜನೆಗಳನ್ನು ವಿವಿಧ ಸಂಘಗಳ ಮುಖ್ಯಸ್ಥರಿಗೆ ತಿಳಿಸಲಿದ್ದಾರೆ
ಹಿಂದುತ್ವವೇ ಬಿಜೆಪಿಯ ಜೀವಾಳವಾಗಿದ್ದು, ತನ್ನೆಲ್ಲಾ ತಂತ್ರಗಾರಿಯನ್ನು ಲೋಕಸಭಾ ಚುನಾವಣೆಯಲ್ಲಿ ಬಳಕೆ ಮಾಡ್ತಿದೆ. ಕೇವಲ ಆರ್ಎಸ್ಎಸ್, ವಿಶ್ವ ಹಿಂದೂ ಪರಿಷತ್, ಅಖಿಲ ಭಾರತ ವಿದ್ಯರ್ಥಿ ಪರಿಷತ್ ಮಾತ್ರವಲ್ಲದೆ, ಸಣ್ಣ ಸಣ್ಣ ಹಿಂದೂಪರ ಸಂಘಟನೆಗಳು, ದೇವಸ್ಥಾನ ಮೇಲ್ವಿಚಾರಣಾ ಸಮಿತಿ ಸೇರಿದಂತೆ ಸಾಕಷ್ಟು ಬೇರು ಮಟ್ಟದಿಂದ ಮತ ಸೆಳೆಯಲು ನಿರ್ಧರಿಸಿದೆ. ಅದಕ್ಕಾಗಿಯೇ ಮಂತ್ರಾಲಯದಲ್ಲಿ ಬೈಠಕ್ ನಡೆಸುತ್ತಿದ್ದು, ಆ ಬಳಿಕ ದೇಶದ ಇತರೇ ದೇವಸ್ಥಾನಗಳಲ್ಲಿ ಇದೇ ರೀತಿಯ ಕಾರ್ಯಕ್ರಮ ರೂಪಿಸಲಿದೆ ಎಂಬ ಮಾಹಿತಿ ಬಂದಿವೆ…
ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…