ಲೋಕಸಭಾ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ತಯಾರಿ ಆರಂಭಿಸಿದೆ. ದೇಶದ ಅಧಿಕೃತ ರಾಜಕೀಯ ಪಕ್ಷಗಳ ಸಭೆ ನಡೆಸಿ ಪಕ್ಷಗಳ ಅಹವಾಲು ಆಲಿಸಿದೆ. ಇದರ ಜೊತೆಗೆ ರಾಜಕೀಯ ಪಕ್ಷಗಳೂ ಕೂಡ ತನ್ನದೇ ಆದ ತಂತ್ರಗಾರಿಕೆ ಮತ ಬ್ಯಾಂಕ್ ವೃದ್ಧಿ ಸೇರಿದಂತೆ ಸಾಕಷ್ಟು ಕೆಲಸಗಳನ್ನು ಮಾಡಿಕೊಳ್ಳುತ್ತಿವೆ. ಇದೀಗ ಬಿಜೆಪಿ ಗೆಲುವಿಗೆ ಸಹಕಾರಿಯಾಗಲು ರಾಷ್ಟ್ರೀಯ ಸ್ವಯಂ ಸೇವ ಸಂಘ ಅಣಿಯಾಗಿದೆ. ಮತ್ತೆ ಬಿಜೆಪಿ ನೇತೃತ್ವದಲ್ಲಿ ಅಧಿಕಾರ ಹಿಡಿಯಲು ಆರ್ಎಸ್ಎಸ್ ತಂತ್ರಗಾರಿಕೆ ರೂಪಿಸಲು ಮುಂದಾಗಿದೆ.
ಮೂರು ದಿನಗಳ ಕಾಲ ರಾಯಚೂರಿನಲ್ಲಿ ಆರ್ಎಸ್ಎಸ್ ಬೈಠಕ್ ಹಾಗೂ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಬಳಿಕ ಎರಡು ದಿನ ಮಂತ್ರಾಲಯದಲ್ಲಿ ಆರ್ಎಸ್ಎದ್ ಬೈಠಕ್ ನಡೆಯಲಿದೆ. ಈಗಾಗಲೇ ರಾಯಚೂರಿಗೆ ಆಗಮಿಸಿರುವ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಲೆಕ್ಕಾಚಾರ ಶುರು ಮಾಡಿದ್ದಾರೆ.
ಸೆಪ್ಟೆಂಬರ್ 1 ರಿಂದ ಮಂತ್ರಾಲಯದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಆರ್ಎಸ್ಎಸ್ ಬೈಠಕ್ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಭಾಗಿಯಾಗಲಿದ್ದು, ಬಿಜೆಪಿ ಮತಬ್ಯಾಂಕ್ ಸ್ಟ್ರಾಂಗ್ ಮಾಡುವ ಬಗ್ಗೆ ಸ್ವಯಂ ಸೇವಕರ ಜೊತೆ ಚರ್ಚಿಸಲಿದ್ದಾರೆ. ಮಂತ್ರಾಲಯದ ತಿರುಮಲ ವಸತಿ ಗೃಹದಲ್ಲಿ ನಡೆಯಲಿರುವ ಬೈಠಕ್ನಲ್ಲಿ ಸುಮಾರು 300 ಜನ ವಿವಿಧ ಹಿಂದು ಪರ ಸಂಘಟನೆಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಸಂಘ ಪರಿವಾರದ ಅಭಿವೃದ್ಧಿ ಕೆಲಸಗಳು ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಾಡಬೇಕಿರುವ ಯೋಜನೆಗಳನ್ನು ವಿವಿಧ ಸಂಘಗಳ ಮುಖ್ಯಸ್ಥರಿಗೆ ತಿಳಿಸಲಿದ್ದಾರೆ
ಹಿಂದುತ್ವವೇ ಬಿಜೆಪಿಯ ಜೀವಾಳವಾಗಿದ್ದು, ತನ್ನೆಲ್ಲಾ ತಂತ್ರಗಾರಿಯನ್ನು ಲೋಕಸಭಾ ಚುನಾವಣೆಯಲ್ಲಿ ಬಳಕೆ ಮಾಡ್ತಿದೆ. ಕೇವಲ ಆರ್ಎಸ್ಎಸ್, ವಿಶ್ವ ಹಿಂದೂ ಪರಿಷತ್, ಅಖಿಲ ಭಾರತ ವಿದ್ಯರ್ಥಿ ಪರಿಷತ್ ಮಾತ್ರವಲ್ಲದೆ, ಸಣ್ಣ ಸಣ್ಣ ಹಿಂದೂಪರ ಸಂಘಟನೆಗಳು, ದೇವಸ್ಥಾನ ಮೇಲ್ವಿಚಾರಣಾ ಸಮಿತಿ ಸೇರಿದಂತೆ ಸಾಕಷ್ಟು ಬೇರು ಮಟ್ಟದಿಂದ ಮತ ಸೆಳೆಯಲು ನಿರ್ಧರಿಸಿದೆ. ಅದಕ್ಕಾಗಿಯೇ ಮಂತ್ರಾಲಯದಲ್ಲಿ ಬೈಠಕ್ ನಡೆಸುತ್ತಿದ್ದು, ಆ ಬಳಿಕ ದೇಶದ ಇತರೇ ದೇವಸ್ಥಾನಗಳಲ್ಲಿ ಇದೇ ರೀತಿಯ ಕಾರ್ಯಕ್ರಮ ರೂಪಿಸಲಿದೆ ಎಂಬ ಮಾಹಿತಿ ಬಂದಿವೆ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…