ಲಕ್ನೋ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿಗೆ ಹಿನ್ನಡೆಯಾದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಕ್ರಿಕೆಟಿಗ, ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನರು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿಯವರಿಂದ ರಾಷ್ಟ್ರೀಯತೆಯ ಪಾಠವನ್ನು ಕಲಿಯಬೇಕು ಎಂದು ತಿಳಿಸಿದ್ದಾರೆ.
ಅಂದು ಪ್ರಧಾನಿಯಾಗಿದ್ದ ರಾಜೀವ್ ಗಾಂಧಿಯವರ ಹತ್ಯೆಯ ಬಳಿಕ ಕಾಂಗ್ರೆಸ್ನ್ನು ಮುನ್ನಡೆಸಿದ ಸೋನಿಯಾ ಗಾಂಧಿಯವರನ್ನು ಹೊಗಳಿದ ಸಿಧು, ಸೋನಿಯಾ ಗಾಂಧಿಯವರಿಂದಾಗಿಯೇ ಕೇಂದ್ರದಲ್ಲಿ ಕಾಂಗ್ರೆಸ್ ಮತ್ತೆ 10 ವರ್ಷ ಆಡಳಿತ ನಡೆಸಲು ಸಾಧ್ಯವಾಯಿತು ಎಂದರು.
70 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಯಾವುದೇ ಅಭಿವೃದ್ಧಿ ನಡೆಸಿಲ್ಲ ಎಂದು ಪದೇಪದೆ ಆರೋಪ ಮಾಡುತ್ತಿರುವ ಬಿಜೆಪಿ ವಿರುದ್ಧ ಹರಿಹಾಯ್ದರು. ಒಂದು ಚಿಕ್ಕ ಸೂಜಿಯಿಂದ, ವಿಮಾನದವರೆಗಿನಷ್ಟು ಅಭಿವೃದ್ಧಿಯನ್ನು ಕಾಂಗ್ರೆಸ್ ಅವಧಿಯಲ್ಲೇ ಮಾಡಲಾಗಿದೆ ಎಂದು ಹೇಳಿದರು.
ರಫೇಲ್ ಯುದ್ಧ ವಿಮಾನ ವಿವಾದವೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ಸೋಲಿಗೆ ಕಾರಣವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…