Featured

ಲೋಕಸಭಾ ಚುನಾವಣೆ :ಉಡುಪಿ-ಚಿಕ್ಕಮಗಳೂರು ಜೆಡಿಎಸ್ ವಶಕ್ಕೆ; ಬಿಜೆಪಿ ಮುಂದೆ ಮಂಡಿಯೂರಿತೆ ಕಾಂಗ್ರೆಸ್…? – Vishwanews24

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಭಾರೀ ಗೊಂದಲಕ್ಕೀಡಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಸೀಟು ಹಂಚಿಕೆ ವಿಚಾರ ಕೊನೆಗೂ ಬಗೆಹರಿದಿದೆ. ಕಾಂಗ್ರೆಸ್ ಹಾಲಿ ಸಂಸದರಿರುವ ತುಮಕೂರು ಕ್ಷೇತ್ರ ಸೇರಿದಂತೆ 8 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.

ಉತ್ತರ ಕನ್ನಡ, ಉಡುಪಿ -ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ, ವಿಜಯಪುರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ.
ಮೈಸೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳನ್ನು ಕಾಂಗ್ರೆಸ್ ಉಳಿಸಿಕೊಂಡಿದೆ. ಜೆಡಿಎಸ್ 8 ಕ್ಷೇತ್ರ ಹಾಗೂ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ.

ಕಾಂಗ್ರೆಸ್ ಜೆಡಿಎಸ್ ಮೈತ್ರಿಯಲ್ಲಿ ಇದೀಗ ಎಂಟು ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ. ಇದರಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರ ಕೂಡ ಸೇರಿದೆ. ಜೆಡಿಎಸ್ ದುರ್ಬಲವಾಗಿರುವ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿರುವುದು ಹಾಸ್ಯಾಸ್ಪದವೆಂದು ಕಾಂಗ್ರೆಸ್ ಕಾರ್ಯಕರ್ತರು ಮಾತಡತೊಡಗಿದ್ದಾರೆ.

ಬಿಜೆಪಿಯಲ್ಲಿ ‌ಸಂಸದೆ ಶೋಭಾ ಕರಂದ್ಲಾಜೆ ಬಹುತೇಕ ಫೈನಲ್ ಆಗಿದ್ದು ಈ ಬಾರಿ ಅಂತರಿಕ ವಿರೋಧಕ್ಕೆ ಒಳಗಾಗಿದ್ದ ಅವರು ಕಾಂಗ್ರೆಸ್ ನಿಂದ ಬಿಗ್ ಫೈಟ್ ನಿರೀಕ್ಷಿಸಲಾಗಿತ್ತು. ಆದರೆ ಮೈತ್ರಿ ಎಲ್ಲೊ ಕಾಂಗ್ರೆಸ್ ಗೆ ಕೈ ಕೊಟ್ಟಿದ್ದು, ಚುನಾವಣೆ ಮುಂಚೆಯೇ ಉಡುಪಿ ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಗೆ ಬಿಟ್ಟು ಕೊಟ್ಟು ಸೋಲೊಪ್ಪಿಕೊಂಡಂತಾಗಿದೆ ಎಂದು ಕಾರ್ಯಕರ್ತರು ಮಾತಾಡಿಕೊಳ್ಳಲು ಆರಂಭಿಸಿದ್ದಾರೆ.

ಕಾಂಗ್ರೆಸ್ ಪ್ರಾಬಲ್ಯವಿರುವ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ ಪಾಲಾಗಿದೆ. ಆದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಯಾರು ಕಣಕ್ಕಿಯುತ್ತಾರೆ ಎಂಬುವುದು ಬಹಳಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಬಿಜೆಪಿ ಟಿಕೆಟ್ ಕೈತಪ್ಪಿದರೆ ಕೆ. ಜಯಪ್ರಕಾಶ್ ಹೆಗ್ಡೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ನ ಅಮೃತ್ ಶೆಣೈ ಈಗಾಗಲೇ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನ ಗೊಂಡಿದ್ದು, ನಿರ್ಧಾರ ಬದಲಾಯಿಸದಿದ್ದರೆ ಪಕ್ಷೇತರನಾಗಿ ನಿಲ್ಲುವ ಬಗ್ಗೆ ಹೇಳಿಕೊಂಡಿದ್ದಾರೆ!

 

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

22 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

22 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

22 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

23 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago