Featured

ಲೋಕಸಭಾ ಚುನಾವಣೆ :ಉಡುಪಿ-ಚಿಕ್ಕಮಗಳೂರು ಜೆಡಿಎಸ್ ವಶಕ್ಕೆ; ಬಿಜೆಪಿ ಮುಂದೆ ಮಂಡಿಯೂರಿತೆ ಕಾಂಗ್ರೆಸ್…? – Vishwanews24

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಭಾರೀ ಗೊಂದಲಕ್ಕೀಡಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಸೀಟು ಹಂಚಿಕೆ ವಿಚಾರ ಕೊನೆಗೂ ಬಗೆಹರಿದಿದೆ. ಕಾಂಗ್ರೆಸ್ ಹಾಲಿ ಸಂಸದರಿರುವ ತುಮಕೂರು ಕ್ಷೇತ್ರ ಸೇರಿದಂತೆ 8 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.

ಉತ್ತರ ಕನ್ನಡ, ಉಡುಪಿ -ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ, ವಿಜಯಪುರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ.
ಮೈಸೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳನ್ನು ಕಾಂಗ್ರೆಸ್ ಉಳಿಸಿಕೊಂಡಿದೆ. ಜೆಡಿಎಸ್ 8 ಕ್ಷೇತ್ರ ಹಾಗೂ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ.

ಕಾಂಗ್ರೆಸ್ ಜೆಡಿಎಸ್ ಮೈತ್ರಿಯಲ್ಲಿ ಇದೀಗ ಎಂಟು ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ. ಇದರಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರ ಕೂಡ ಸೇರಿದೆ. ಜೆಡಿಎಸ್ ದುರ್ಬಲವಾಗಿರುವ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿರುವುದು ಹಾಸ್ಯಾಸ್ಪದವೆಂದು ಕಾಂಗ್ರೆಸ್ ಕಾರ್ಯಕರ್ತರು ಮಾತಡತೊಡಗಿದ್ದಾರೆ.

ಬಿಜೆಪಿಯಲ್ಲಿ ‌ಸಂಸದೆ ಶೋಭಾ ಕರಂದ್ಲಾಜೆ ಬಹುತೇಕ ಫೈನಲ್ ಆಗಿದ್ದು ಈ ಬಾರಿ ಅಂತರಿಕ ವಿರೋಧಕ್ಕೆ ಒಳಗಾಗಿದ್ದ ಅವರು ಕಾಂಗ್ರೆಸ್ ನಿಂದ ಬಿಗ್ ಫೈಟ್ ನಿರೀಕ್ಷಿಸಲಾಗಿತ್ತು. ಆದರೆ ಮೈತ್ರಿ ಎಲ್ಲೊ ಕಾಂಗ್ರೆಸ್ ಗೆ ಕೈ ಕೊಟ್ಟಿದ್ದು, ಚುನಾವಣೆ ಮುಂಚೆಯೇ ಉಡುಪಿ ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಗೆ ಬಿಟ್ಟು ಕೊಟ್ಟು ಸೋಲೊಪ್ಪಿಕೊಂಡಂತಾಗಿದೆ ಎಂದು ಕಾರ್ಯಕರ್ತರು ಮಾತಾಡಿಕೊಳ್ಳಲು ಆರಂಭಿಸಿದ್ದಾರೆ.

ಕಾಂಗ್ರೆಸ್ ಪ್ರಾಬಲ್ಯವಿರುವ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ ಪಾಲಾಗಿದೆ. ಆದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಯಾರು ಕಣಕ್ಕಿಯುತ್ತಾರೆ ಎಂಬುವುದು ಬಹಳಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಬಿಜೆಪಿ ಟಿಕೆಟ್ ಕೈತಪ್ಪಿದರೆ ಕೆ. ಜಯಪ್ರಕಾಶ್ ಹೆಗ್ಡೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ನ ಅಮೃತ್ ಶೆಣೈ ಈಗಾಗಲೇ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನ ಗೊಂಡಿದ್ದು, ನಿರ್ಧಾರ ಬದಲಾಯಿಸದಿದ್ದರೆ ಪಕ್ಷೇತರನಾಗಿ ನಿಲ್ಲುವ ಬಗ್ಗೆ ಹೇಳಿಕೊಂಡಿದ್ದಾರೆ!

 

 

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

23 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

30 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

36 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

58 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago