ಮಂಗಳೂರು, :ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಬಹುಮತ ಸಾಧಿಸಿದರೆ ಗ್ರಾಮ ಗ್ರಾಮಗಳಲ್ಲಿ ಬಜರಂಗದಳವನ್ನು ಆರಂಭಿಸಲಾಗುವುದೆಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.
ಪುತ್ತೂರಿನಲ್ಲಿ ಆಯೋಜಿಸಲಾಗಿದ್ದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಕೂಡ ಮೋದಿಯ ಕುರಿತು ಮಾತನಾಡುತ್ತಿದ್ದಾರೆ. ಈ ಮೂಲಕ ಮೋದಿ ಅವರ ಸಾಮರ್ಥ್ಯ ಅನಾವರಣಗೊಂಡಿದೆ ಎಂದು ಹೇಳಿದರು.
ಏಪ್ರಿಲ್ 13 ರ ಮೋದಿ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಚಪ್ಪರ ಮುಹೂರ್ತ ಬಿಜೆಪಿ ಪಕ್ಷವು ಯಾವುದೇ ಜಾತಿಗೆ ಸೀಮಿತವಾಗಿ ಯೋಚನೆ ಮಾಡದೆ ಎಲ್ಲಾ ಜಾತಿಯವರನ್ನು ಗೌರವಿಸುತ್ತದೆ ಹಾಗೂ ಪ್ರೀತಿಸುತ್ತದೆ. ರಾಷ್ಟ್ರದ ಏಳಿಗೆ, ಹಿಂದುತ್ವ ಹಾಗೂ ಅಭಿವೃದ್ಧಿಗಾಗಿ ನಾಡಿನ ಜನತೆ ಮೋದಿಯನ್ನು ಬಯಸಿದ್ದಾರೆ ಎಂದು ಸುನೀಲ್ ಕುಮಾರ್ ತಿಳಿಸಿದರು.
ಕಾಂಗ್ರೆಸ್ ಮುಖಂಡರು ನಮ್ಮನ್ನು ಮೋದಿಯ ಹೆಸರು ಹೇಳಿ ಮತ ಕೇಳುತ್ತಿದ್ದೇವೆ ಎಂದು ಟೀಕಿಸುತ್ತಿದ್ದಾರೆ. ಹಾಗಿದ್ದರೆ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿಯನ್ನು ಪ್ರಧಾನಿ ಎಂದು ಘೋಷಿಸಲಿ ಎಂದು ಸವಾಲು ಹಾಕಿದರು.
ಪ್ರಧಾನಿ ನರೇಂದ್ರ ಮೋದಿ, ಅವರು ಏಪ್ರಿಲ್ 13ರಂದು ಮಂಗಳೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 3.30ಕ್ಕೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ. ಈ ಸಭೆಗೆ 1 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಸುನೀಲ್ ಕುಮಾರ್ ಸ್ಪಷ್ಟಪಡಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…