ಮಂಗಳೂರು, :ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಬಹುಮತ ಸಾಧಿಸಿದರೆ ಗ್ರಾಮ ಗ್ರಾಮಗಳಲ್ಲಿ ಬಜರಂಗದಳವನ್ನು ಆರಂಭಿಸಲಾಗುವುದೆಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.
ಪುತ್ತೂರಿನಲ್ಲಿ ಆಯೋಜಿಸಲಾಗಿದ್ದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಕೂಡ ಮೋದಿಯ ಕುರಿತು ಮಾತನಾಡುತ್ತಿದ್ದಾರೆ. ಈ ಮೂಲಕ ಮೋದಿ ಅವರ ಸಾಮರ್ಥ್ಯ ಅನಾವರಣಗೊಂಡಿದೆ ಎಂದು ಹೇಳಿದರು.
ಏಪ್ರಿಲ್ 13 ರ ಮೋದಿ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಚಪ್ಪರ ಮುಹೂರ್ತ ಬಿಜೆಪಿ ಪಕ್ಷವು ಯಾವುದೇ ಜಾತಿಗೆ ಸೀಮಿತವಾಗಿ ಯೋಚನೆ ಮಾಡದೆ ಎಲ್ಲಾ ಜಾತಿಯವರನ್ನು ಗೌರವಿಸುತ್ತದೆ ಹಾಗೂ ಪ್ರೀತಿಸುತ್ತದೆ. ರಾಷ್ಟ್ರದ ಏಳಿಗೆ, ಹಿಂದುತ್ವ ಹಾಗೂ ಅಭಿವೃದ್ಧಿಗಾಗಿ ನಾಡಿನ ಜನತೆ ಮೋದಿಯನ್ನು ಬಯಸಿದ್ದಾರೆ ಎಂದು ಸುನೀಲ್ ಕುಮಾರ್ ತಿಳಿಸಿದರು.
ಕಾಂಗ್ರೆಸ್ ಮುಖಂಡರು ನಮ್ಮನ್ನು ಮೋದಿಯ ಹೆಸರು ಹೇಳಿ ಮತ ಕೇಳುತ್ತಿದ್ದೇವೆ ಎಂದು ಟೀಕಿಸುತ್ತಿದ್ದಾರೆ. ಹಾಗಿದ್ದರೆ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿಯನ್ನು ಪ್ರಧಾನಿ ಎಂದು ಘೋಷಿಸಲಿ ಎಂದು ಸವಾಲು ಹಾಕಿದರು.
ಪ್ರಧಾನಿ ನರೇಂದ್ರ ಮೋದಿ, ಅವರು ಏಪ್ರಿಲ್ 13ರಂದು ಮಂಗಳೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 3.30ಕ್ಕೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ. ಈ ಸಭೆಗೆ 1 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಸುನೀಲ್ ಕುಮಾರ್ ಸ್ಪಷ್ಟಪಡಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…