ಬೆಂಗಳೂರು : ಲೋಕಸಭಾ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಕರ್ನಾಟಕ ರಾಜ್ಯದ ಮೊದಲ ಸುತ್ತಿನ ಅಭ್ಯರ್ಥಿಗಳ ಪಟ್ಟಿ ಸಿದ್ದಗೊಂಡಿರುವ ಮಾಹಿತಿ ಹೊರಬಿದ್ದಿದೆ.
ಬಿಎಸ್.ಯಡಿಯೂರಪ್ಪ ಹಾಗೂ ತಂಡ ರೆಡಿ ಮಾಡಿರುವ ಪಟ್ಟಿ ಬುಧವಾರ ದೆಹಲಿ ಅಂಗಳಕ್ಕೆ ಹೋಗಲಿದ್ದು ಶುಕ್ರವಾರದೊಳಗೆ ಫೈನಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸುಮಾರು 14 ಲೋಕಸಭಾ ಕ್ಷೇತ್ರದ ಪಟ್ಟಿ ರೆಡಿಯಾಗಿದ್ದು ಇನ್ನುಳಿದ ಪಟ್ಟಿಯಲ್ಲಿ ಜೆಡಿಎಸ್ ಪಾಲು ಎಷ್ಟಿದೆಂಬುದು ಸ್ಪಷ್ಟವಾಗಲಿದೆಂಬ ಮಾಹಿತಿ ಜೆಡಿಎಸ್ ಮೂಲದಿಂದ ಸ್ಪೋಟಗೊಂಡಿದೆ.
ದೆಹಲಿ ಅಂಗಳದಲ್ಲಿ ರಾಜ್ಯ ರೆಡಿ ಮಾಡಿರುವ ಪಟ್ಟಿಯ ಬದಲಾವಣೆ ಅಥವಾ ಸಂಘದ ಸೇರ್ಪಡೆ ಹಾಗೂ ಡಿಲಿಟ್ ಆಗುವ ಸಾಧ್ಯತೆಯಿದೆ ಮತ್ತು ಸರ್ವೆ ಮಾಹಿತಿ ಆಧಾರದ ಮೇರೆಗೆ ಅದೇ ಫೈನಲಾಗಬಹುದೆಂಬುದು ಒಂದು ಲೆಕ್ಕಾಚಾರ ನಡೆಯುತ್ತಿದೆ.
ಕಾಂಗ್ರೇಸ್ ಫೆಬ್ರವರಿ ಅಂತ್ಯದಲ್ಲಿ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಮಾಹಿತಿ ಹೊರ ಬಿದ್ದ ಕೂಡಲೇ ಬಿಜೆಪಿಯ ಈ ಸ್ಪೋಟಕ ಮಾಹಿತಿ ವಿಶ್ವನ್ಯೂಸ್24 ಗೆ ದೆಹಲಿ ಮೂಲದಿಂದ ಲಭ್ಯವಾಗಿದೆ.
ಮೊದಲ ಪಟ್ಟಿಯಲ್ಲಿ ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಸೇರಿದಂತೆ ಒಟ್ಟು 14 ಕ್ಷೇತ್ರಗಳು ಬಾಕಿ ಉಳಿದಂತಾಗಿದೆ.
ಗೊಂದಲವಿಲ್ಲದ ಮತ್ತು ಆಕಾಂಕ್ಷಿಗಳ ತೀವ್ರ ಪೈಪೋಟಿಯಿಲ್ಲದ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಇದಾಗಿದೆ.
ಬ್ಯುರೋ ರಿಪೋರ್ಟ್ ವಿಶ್ವನ್ಯೂಸ್24 ,ಬೆಂಗಳೂರು
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…
ಮಂಗಳೂರು : ಜೈಲಿಗೆ ಡ್ರಗ್ಸ್, ಮೊಬೈಲ್ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…
ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು: ಸರ್ಕಾರಿ ಕಾಲೇಜಿನ ಬಿಬಿಎ…