ಹೆಚ್ಚು ಸ್ಥಾನ ಗೆದ್ದರೆ ಗ್ಯಾರಂಟಿ ಮುಂದುವರಿಸುತ್ತಾರೆ
ಹಾಸನ: 2024ರ ಲೋಕಸಭಾ ಚುನಾವಣೆ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೇ, 5 ವರ್ಷ ಸಿಎಂ ಆಗಿರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಚುನಾವಣೆಗೂ ಮೊದಲು 5 ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಸಿದ್ದರಾಮಯ್ಯ ಅವರು 5 ಗ್ಯಾರಂಟಿಗಳನ್ನ ಜಾರಿಗೊಳಿಸಿದ್ದಾರೆ. ಮತ್ತೊಮ್ಮೆ ನುಡಿದಂತೆ ನಡೆಯುವುದಾಗಿ ಸಾಬೀತು ಮಾಡಿದ್ದಾರೆ ಎಂದು ತಂದೆಯನ್ನು ಕೊಂಡಾಡಿದ್ದಾರೆ.
ಹೆಚ್ಚು ಸ್ಥಾನ ಗೆದ್ದರೆ ಮತ್ತಷ್ಟು ಬಲ:
ಬಡವರಿಗಾಗಿ, ಶೋಷತರಿಗೆ ಕೆಲಸ ಮಾಡುವ ಹಂಬಲ ಕಾಂಗ್ರೆಸ್ ಪಕ್ಷಕ್ಕೆ ಇದೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲ ನೀಡಬೇಕು. ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತೆ. ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಹಿಂದೆ ಸಾಮಾಜಿಕ ಕಾರ್ಯಕ್ರಮಕ್ಕಾಗಿ ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣ ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು ಎಂದು ಮನವಿ ಮಾಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…