Featured

ಲೋಕಸಭಾ ಚುನಾವಣೆ ಗೆಲ್ಲಲು ಸದ್ದಿಲ್ಲದೆ ನಡೆಯುತ್ತಿದೆ ಚಾಣಕ್ಯ ತಂತ್ರ ;ಯಡಿಯೂರಪ್ಪಗೆ ಲೋಕಸಭಾ ಚುನಾವಣಾ ಪ್ರಚಾರದ ಜವಾಬ್ದಾರಿ

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ.ಬಲಿಷ್ಠ ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ.
ಈ ಚಟುವಟಿಕೆಯಲ್ಲಿ ಬಿಜೆಪಿ ಒಂದು ಹೆಜ್ಜೆ ಮುಂದಿದೆ .

ಕರ್ನಾಟಕ ರಾಜಕೀಯ ಕಣಕ್ಕೆ ನೆರವಾಗಿ ದುಮುಕಿದ ಷಾ,
ಈ ನಡುವೆ ಅಮಿತ್ ಶಾ ಮತ್ತೊಂದು ತಾಣಕ್ಕೆ ತಂತ್ರವನ್ನು ಹೇಳಿದ್ದಾರೆ.ಕರ್ನಾಟಕದಲ್ಲಿ ಹೇಗಾದರೂ ಮಾಡಿ ಇಪ್ಪತ್ತುಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಲೆಕ್ಕಾಚಾರವನ್ನು ಹಾಕಿಕೊಂಡಿ ದ್ದಾರಂತೆ.ಹಾಗಾಗಿಯೇ ಚುನಾವಣಾ ಉಸ್ತುವಾರಿಯನ್ನು ಯಡಿಯೂರಪ್ಪ ಅವರ ಕೈಗೆ ನೀಡಿದ್ದಾರೆ.
ಬೇರೆ ಬೇರೆ ರಾಜ್ಯಗಳಲ್ಲಿ ಮಾಡಿದ ಚುನಾವಣಾ ತಂತ್ರಗಳನ್ನು ಕರ್ನಾಟಕದಲ್ಲೂ ಶಾ ಮಾಡಲಿದ್ದಾರೆ.ಈಗಾಗಲೇ ತನ್ನ ತಂಡದ ಮೂಲಕ ಒಂದು ಹಂತದ ಸರ್ವೆಯನ್ನು ಕೂಡ ನಡೆಸಿದ್ದಾರಂತೆ. ಈ ಸಮೀಕ್ಷೆಯ ಪ್ರಕಾರ ಹಲವು ಕ್ಷೇತ್ರದ ಅಭ್ಯರ್ಥಿಗಳ ಬದಲಾವಣೆಯಾಗುವ ಸಾಧ್ಯತೆ ಇದೆ.ಗೆಲ್ಲಲು ಯೋಗ್ಯವಾದ ಅಭ್ಯರ್ಥಿಗಳಿಗೆ ಟಿಕೇಟ್ ಕೊಡಲು ಷಾ ನಿರ್ಧರಿಸಿದ್ದಾರಂತೆ.ಇದು ಹಾಲಿ ಎಂಪಿಗಳ ನಿದ್ದೆಗೆಡಿಸಿದೆ.ಆದರೆ ಅಮಿತ್ ಶಾಗೆ ವಿರುದ್ಧವಾಗಿ ನಡೆದುಕೊಳ್ಳು ವವರು ಪಕ್ಷದಲ್ಲಿ ಯಾರೂ ಇಲ್ಲ. ಶಾ ಲೆಕ್ಕಾಚಾರ ಯಾವತ್ತೂ ಪಕ್ಷವಾಗಿ ಇರುತ್ತದೆ ಎಂಬುದು ಬಿಜೆಪಿ ನಾಯಕರ ನಂಬಿಕೆ. ಇದು ಹಲವಾರು ಬಾರಿ ಯಶಸ್ವಿ ಯಾಗಿದೆ ಕೂಡ.ಆದರೆ ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಅಮಿತ್ ಅವರ ಈ ತಂತ್ರ ಕರ್ನಾಟಕದಲ್ಲಿ ಯಾವ ರೀತಿ ಯಶಸ್ವಿಯಾಗುತ್ತದೆ ಎಂದು ಕಾದು ನೋಡಬೇಕಿದೆ..

ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ನಾಯಕರನ್ನು ಪಕ್ಕಕ್ಕಿಟ್ಟು ರಾಷ್ಟ್ರ ನಾಯಕರೇ ಚುನಾವಣಾ ಪ್ರಚಾರದ ಹೊಣೆ ಹೊತ್ತಿದ್ದರು. ಆದರೆ, ಅದರಿಂದ ಬಿಜೆಪಿಗೆ ಲಾಭಕ್ಕಿಂತ ಹೆಚ್ಚಾಗಿ ಹೊಡೆತವೇ ಬಿದ್ದಿತು. ಇದರಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ ಹೈಕಮಾಂಡ್​ ಈ ಬಾರಿಯ ಲೋಕಸಭಾ ಚುನಾವಣೆಯ ಕರ್ನಾಟಕ ಪ್ರಚಾರದ ಸಂಪೂರ್ಣ ಹೊಣೆಗಾರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪನವರಿಗೆ ವಹಿಸುವ ಮೂಲಕ ಫುಲ್ ಪವರ್ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಈಗಾಗಲೇ ಚುನಾವಣೆ ಪ್ರಚಾರದ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಸದ್ಯದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟ ಆರಂಭಿಸಿರುವ ಯಡಿಯೂರಪ್ಪ 28 ಲೋಕ ಸಭೆ ಕ್ಷೇತ್ರಗಳಲ್ಲೂ ಗೆಲ್ಲುವ ಅಭ್ಯರ್ಥಿಗಳಿಗೆ ಮಣೆ ಹಾಕಲಿದ್ದಾರೆ. ಲೋಕಸಭೆಗೆ ರಾಜ್ಯದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ಕೂಡ ಯಡಿಯೂರಪ್ಪನವರಿಗೆ ವಹಿಸಲಾಗಿದೆ. ಹೀಗಾಗಿ, ಚುನಾವಣೆ ಹತ್ತಿರ ಇರುವಾಗ ರಾಷ್ಟ್ರ ಬಿಜೆಪಿ ನಾಯಕರ ತಂಡ ರಾಜ್ಯಕ್ಕೆ ಬಂದು ಪ್ರಚಾರದಲ್ಲಿ ಭಾಗಿಯಾಗಲಿದೆ. ಅಲ್ಲಿವರೆಗೆ ಯಡಿಯೂರಪ್ಪ ನಾಯಕತ್ವದಲ್ಲಿಯೇ ಸಂಘಟನೆ ನಡೆಯಲಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago