ಮಂಗಳೂರು,: ಪಂಪ್ವೆಲ್ ಪ್ಲೈಓವರ್ ಸೇರಿದಂತೆ ಹಲವು ವೈಫಲ್ಯಗಳೇ ಸಂಸದ ನಳಿನ್ ಅವರ ಸಾಧನೆ ಎಂದು ಎಂದು ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಆರೋಪಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತ ಕೇಳಿದ ಸಂಸದ ನಳಿನ್ ಕುಮಾರ್ ಕಟೀಲು ಅವರು ದ.ಕ. ಜಿಲ್ಲೆಗೆ ಯಾವುದೇ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಬದಲಾಗಿ ರಾಷ್ಟ್ರೀಯ ಹೆದ್ದಾರಿಯ ನೂರಾರು ಸಮಸ್ಯೆಗಳು ಅಧಿಕಗೊಂಡು, ಪಂಪ್ವೆಲ್ ಪ್ಲೈಓವರ್ ಸೇರಿದಂತೆ ಹಲವು ವೈಫಲ್ಯಗಳೇ ಕಾಣಸಿಗುತ್ತಿವೆ ಎಂದು ಟೀಕಿಸಿದರು.
ಈ ವೇಳೆ ಮಾತನಾಡಿದ ರಮಾನಾಥ ರೈ, ಪ್ರಸ್ತುತ ಜಿಲ್ಲೆಯಲ್ಲಿ ಬಿಜೆಪಿ ಶಾಸಕರಿಂದ ಯಾವುದೇ ಕೆಲಸ ಆಗುತ್ತಿಲ್ಲ. ಹಿಂದಿನ ಶಾಸಕರು ಮಾಡಿದ ಕೆಲಸಗಳನ್ನು ಮಾಡುತ್ತಿದ್ದಾರೆ ಮಾತ್ರ. ದ.ಕ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಆಗುವಂತೆ ಕಾರ್ಯಕರ್ತರು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ, ಪ್ರಮುಖರಾದ ಕೆ.ಎಸ್.ಮಹಮ್ಮದ್ ಮಸೂದ್, ಅಭಯಚಂದ್ರ ಜೈನ್, ಜೆ.ಆರ್ ಲೋಬೋ, ಮೊದಿನ್ ಬಾವಾ, ಕಣಚೂರು ಮೋನು, ರಾಜಶೇಖರ್ ಕೋಟ್ಯಾನ್, ಶಾಲೆಟ್ಪಿಂಟೋ,ಎಂ.ಎಸ್ ಮಹಮ್ಮದ್, ಭರತ್ ಮುಂಡೋಡಿ, ಕವಿತಾ ಸನಿಲ್, ಪುರುಷೋತ್ತಮ ಚಿತ್ರಾಪುರ, ನವೀನ್ ಡಿ’ಸೋಜಾ, ಪ್ರಸಾದ್ರಾಜ್ ಕಾಂಚನ್, ಪದ್ಮನಾಭ ನರಿಂಗಾನ, ಸಂತೋಷ್ ಕುಮಾರ್ ಶೆಟ್ಟಿ, ನೀರಜ್ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…