ಮಂಗಳೂರು,: ಪಂಪ್ವೆಲ್ ಪ್ಲೈಓವರ್ ಸೇರಿದಂತೆ ಹಲವು ವೈಫಲ್ಯಗಳೇ ಸಂಸದ ನಳಿನ್ ಅವರ ಸಾಧನೆ ಎಂದು ಎಂದು ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಆರೋಪಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತ ಕೇಳಿದ ಸಂಸದ ನಳಿನ್ ಕುಮಾರ್ ಕಟೀಲು ಅವರು ದ.ಕ. ಜಿಲ್ಲೆಗೆ ಯಾವುದೇ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಬದಲಾಗಿ ರಾಷ್ಟ್ರೀಯ ಹೆದ್ದಾರಿಯ ನೂರಾರು ಸಮಸ್ಯೆಗಳು ಅಧಿಕಗೊಂಡು, ಪಂಪ್ವೆಲ್ ಪ್ಲೈಓವರ್ ಸೇರಿದಂತೆ ಹಲವು ವೈಫಲ್ಯಗಳೇ ಕಾಣಸಿಗುತ್ತಿವೆ ಎಂದು ಟೀಕಿಸಿದರು.
ಈ ವೇಳೆ ಮಾತನಾಡಿದ ರಮಾನಾಥ ರೈ, ಪ್ರಸ್ತುತ ಜಿಲ್ಲೆಯಲ್ಲಿ ಬಿಜೆಪಿ ಶಾಸಕರಿಂದ ಯಾವುದೇ ಕೆಲಸ ಆಗುತ್ತಿಲ್ಲ. ಹಿಂದಿನ ಶಾಸಕರು ಮಾಡಿದ ಕೆಲಸಗಳನ್ನು ಮಾಡುತ್ತಿದ್ದಾರೆ ಮಾತ್ರ. ದ.ಕ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಆಗುವಂತೆ ಕಾರ್ಯಕರ್ತರು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ, ಪ್ರಮುಖರಾದ ಕೆ.ಎಸ್.ಮಹಮ್ಮದ್ ಮಸೂದ್, ಅಭಯಚಂದ್ರ ಜೈನ್, ಜೆ.ಆರ್ ಲೋಬೋ, ಮೊದಿನ್ ಬಾವಾ, ಕಣಚೂರು ಮೋನು, ರಾಜಶೇಖರ್ ಕೋಟ್ಯಾನ್, ಶಾಲೆಟ್ಪಿಂಟೋ,ಎಂ.ಎಸ್ ಮಹಮ್ಮದ್, ಭರತ್ ಮುಂಡೋಡಿ, ಕವಿತಾ ಸನಿಲ್, ಪುರುಷೋತ್ತಮ ಚಿತ್ರಾಪುರ, ನವೀನ್ ಡಿ’ಸೋಜಾ, ಪ್ರಸಾದ್ರಾಜ್ ಕಾಂಚನ್, ಪದ್ಮನಾಭ ನರಿಂಗಾನ, ಸಂತೋಷ್ ಕುಮಾರ್ ಶೆಟ್ಟಿ, ನೀರಜ್ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…