ಸುಬ್ರಹ್ಮಣ್ಯ: ಭಾರತದ ಅತೀ ದೊಡ್ಡ ಪ್ರಜಾಪ್ರಭುತ್ವ ಹಬ್ಬವಾದ ಲೋಕಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆಗಬೇಕು ಎಂದು ಬಿಜೆಪಿ ಕೊಡಗು – ಸೋಮವಾರಪೇಟೆ ಭಾಗದ ಮೋದಿ ಅಭಿಮಾನಿಗಳು ನಾಗರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಸೋಮವಾರ ಬೆಳಗ್ಗೆ ಉರುಳು ಸೇವೆ ನಡೆಸಿದರು.
ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಮಹಾರುದ್ರಯಾಗ ನಡೆಸಲಾಗಿತ್ತು. ಮೋದಿಯವರ ನಕ್ಷತ್ರ, ಹೆಸರಿನಲ್ಲಿ ಸಂಕಲ್ಪ ಮಾಡಿ ಪೂರ್ಣಾಹುತಿ ನೀಡಲಾಗಿತ್ತು. ಈಗ, ಇನ್ನೊಂದು ಹೆಜ್ಜೆ ಮುಂದೆ ಹೋಗಿರುವ ಕೊಡಗು – ಸೋಮವಾರಪೇಟೆ ಭಾಗದ ಮೋದಿ ಅಭಿಮಾನಿಗಳು ನಾಗರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಉರುಳು ಸೇವೆ ನಡೆಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆಗಬೇಕು ಎಂದು ಆರಂಭದಲ್ಲಿ ಶ್ರೀ ದೇವರ ದರ್ಶನ ಪಡೆದ ಇವರು ಕೊಡಗಿನ ರವಿ ರೈ ಎಂಬವರ ಮುಂದಾಳತ್ವದಲ್ಲಿ ಕುಮಾರ, ರಾಮು, ಮಣಿ, ಕಿರ್ತು, ಸುಧಾ, ಇಶಾ, ಜಯರಾಮ್, ಕುಮಾರ, ರಮೇಶ್, ಗಗನ, ಭಾಸ್ಕರ, ನಂದ, ಮೋಹನ, ಸತೀಶ್, ಮಂಜು, ಸತೀಶ್ ಎನ್, ಚೇತನ್, ಕೃಷ್ಣ ಶಿವಣ್ಣ, ಮಂಜ ಸಹಿತ 16 ಮಂದಿ ಉರುಳು ಸೇವೆ ನಡೆಸಿದ್ದಾರೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…