ಶಿವಮೊಗ್ಗ: ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ಬಗ್ಗೆ ಚರ್ಚಿಸಲು ಬುಧವಾರ ದೆಹಲಿಯಲ್ಲಿ ಪಕ್ಷದ ಸಭೆ ಕರೆಯಲಾಗಿದ್ದು, ನಾನೂ ಭಾವಹಿಸುತ್ತೇನೆ. ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರ ಮನಸ್ಸಿನಲ್ಲಿ ಏನಿದೆಯೋ ತಿಳಿದಿಲ್ಲ. ಟಿಕೆಟ್ ಹಂಚಿಕೆಯಲ್ಲಿ ಅವರ ತೀರ್ಮಾನವೇ ಅಂತಿಮ. ಬಿಜೆಪಿ–ಜೆಡಿಎಸ ಹೊಂದಾಣಿಕೆ ನಿಶ್ಚಿತವಾಗಿದೆ. ಆದರೆ ಸ್ಥಾನ ಹಂಚಿಕೆ ಅಂತಿಮವಾಗಿಲ್ಲ ಎಂದರು.
ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಯಾವುದೇ ಅರ್ಥವಿಲ್ಲ.ಅವರ ಒಳ್ಳೆಯ ಕೆಲಸಗಳನ್ನು ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ. ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು ಹೇಳಿದರು.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದ ವರದಿ ಕೈ ಸೇರಿ ಮೂರು ನಾಲ್ಕು ದಿನ ಕಳೆದರೂ ಸರ್ಕಾರ ಅದನ್ನು ಬಿಡುಗಡೆ ಮಾಡಿಲ್ಲ. ಎಫ್ಎಸ್ಎಲ್ ವರದಿಯನ್ನು ಏಕೆ ಬಚ್ಚಿಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಆ ವರದಿಯಲ್ಲಿರುವ ಅಂಶಗಳನ್ನು ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…