ಬೆಂಗಳೂರು: ಲೋಕಸಭಾ ಚುನಾವಣೆಗೆ ಕೇವಲ ತಿಂಗಳು ಬಾಕಿ ಇರುವಾಗಲೇ ಫೆಬ್ರವರಿ ಕೊನೆಯಲ್ಲಿ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.
14- 16 ಕ್ಷೇತ್ರಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಬಹುತೇಕ ಹಾಲಿಗಳಿಗೆ ಟಿಕೆಟ್ ಸಿಗಲಿದೆ. ಬಿಜೆಪಿ ಲೋಕಸಭೆ ತಯಾರಿ ಮಧ್ಯೆ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಸುಳಿವು ನೀಡಿದ್ದಾರೆ.
ಗೆಲುವು ಸ್ಪಷ್ಟ ಇರುವ ಕ್ಷೇತ್ರಗಳ ಅಮಿತ್ ಶಾ ವರದಿ ಪಡೆದಿದ್ದು ಮೊದಲ ಪಟ್ಟಿಯಲ್ಲಿ ಬಹುತೇಕ ಗೆಲ್ಲುವ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಹೊಸ ಮುಖ, ಅಚ್ಚರಿ ಅಭ್ಯರ್ಥಿ ಹೆಸರು ಎರಡು ಮತ್ತು ಮೂರನೇ ಪಟ್ಟಿಯಲ್ಲಿ ಪ್ರಕಟವಾಗಲಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೊನೆ ಗಳಿಗೆಯಲ್ಲಿ ಕೆಲ ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಸೋಲಿನ ಬಳಿಕ ನಡೆದ ಆತ್ಮಾವಲೋಕನ ಸಭೆಯಲ್ಲೂ ಈ ವಿಷಯ ಚರ್ಚೆಯಾಗಿತ್ತು. ಈ ಕಾರಣಕ್ಕೆ ಈ ಬಾರಿ ಬಹಳ ಬೇಗ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬೇಗ ಬಿಡುಗಡೆಯಾಗಲಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…