Featured

ಲೋಕಸಭಾ ಚುನಾವಣೆ: ಮೋಹನ್‌ಲಾಲ್ ಕಣಕ್ಕಿಳಿಸಲು ಆರ್‌ಎಸ್‌ಎಸ್‌ ಕಾರ್ಯತಂತ್ರ

ನವದೆಹಲಿ: ಬಿಜೆಪಿ ಅಭ್ಯರ್ಥಿಯಾಗಿ ಮಲಯಾಳಂ ಸೂಪರ್‌ಸ್ಟಾರ್‌ ಮೋಹನ್‌ಲಾಲ್‌ ಅವರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಆರ್‌ಎಸ್‌ಎಸ್‌ ಪ್ರಯತ್ನಿಸುತ್ತಿರುವುದಾಗಿ ತಿಳಿದು ಬಂದಿದೆ.

ರಾಷ್ಟ್ರಪ್ರಶಸ್ತಿ ವಿಜೇತ ನಟ ಮೋಹನ್‌ಲಾಲ್‌(58) ಅವರನ್ನು ಕೇರಳದ ತಿರುವನಂತಪುರಂನಿಂದ ಸ್ಪರ್ಧಿಸುವಂತೆ ಕೇಳಲಾಗಿದೆ. ಅವರು ಬಿಜೆಪಿ ಸೇರಲಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಡಿದೆಯಾದರೂ ಮೋಹನ್‌ಲಾಲ್‌ ಇದನ್ನು ಖಚಿತ ಪಡಿಸಿಲ್ಲ.

ಮೋಹನ್‌ಲಾಲ್‌ರನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಆರ್‌ಎಸ್‌ಎಸ್‌ ಹೆಚ್ಚಿನ ಆಸಕ್ತಿ ವಹಿಸಿದೆ ಹಾಗೂ ಸಭೆ ನಡೆಸಿ ಚರ್ಚಿಸುತ್ತಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಆದರೆ, ಆರ್‌ಎಸ್‌ಎಸ್‌ ಸಭೆಯ ಕುರಿತು ಬಿಜೆಪಿಗೆ ರಾಜ್ಯ ಘಟಕದ ಮುಖಂಡರಿಗೆ ಮಾಹಿತಿ ರವಾನೆಯಾಗಿಲ್ಲ.

ವೈಯನಾಡಿನಲ್ಲಿ ತಮ್ಮ ಫೌಂಡೇಷನ್‌ ಆಯೋಜಿಸಿರುವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲು ಸೋಮವಾರ ಮೋಹನ್‌ಲಾಲ್‌ ದೆಹಲಿ ಭೇಟಿ ನೀಡಿದ್ದರು. ಈ ಭೇಟಿಯ ಬಳಿಕ ನಟನ ರಾಜಕೀಯ ಪ್ರವೇಶದ ಕುರಿತು ಸುದ್ದಿ ಹರಡಿದೆ.

ವಿಶ್ವಶಾಂತಿ ಫೌಂಡೇಷನ್‌: ಮೋಹನ್‌ಲಾಲ್‌ ತನ್ನ ತಂದೆ ವಿಶ್ವನಾಥನ್‌ ನಾಯರ್‌ ಮತ್ತು ತಾಯಿ ಶಾಂತಾಕುಮಾರಿ ಅವರ ಸ್ಮರಣಾರ್ಥ ವಿಶ್ವಶಾಂತಿ ಫೌಂಡೇಷನ್‌ ಸ್ಥಾಪಿಸಿದ್ದಾರೆ. ವೈಯನಾಡಿನಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಸಂಸ್ಥೆ ನಿರ್ಮಿಸಲಾಗಿದ್ದು, ಇದರ ಉದ್ಘಾಟನೆಗೆ ಪ್ರಧಾನಿ ಅವರನ್ನು ಆಹ್ವಾನಿಸಲಾಗಿದೆ. ಪ್ರವಾಹ ಪರಿಹಾರ ಕಾರ್ಯಗಳಲ್ಲಿ ವಿಶ್ವಶಾಂತಿ ಫೌಂಡೇಷನ್‌ ಆರ್‌ಎಸ್‌ಎಸ್‌ನ ಸೇವಾ ಭಾರತಿಯೊಂದಿಗೆ ಕೈಜೋಡಿಸಿದೆ.

ಈ ಫೌಂಡೇಷನ್‌ ಮೂಲಕ ಮತ್ತಷ್ಟು ಸಮಾಜಮುಖಿ ಕಾರ್ಯಗಳನ್ನು ಯೋಜಿಸಲಾಗಿದ್ದು, ಆರ್‌ಎಸ್‌ಎಸ್ ಇದರ ಬೆನ್ನೆಗೆ ನಿಂತಿದೆ. ಕೇರಳದಲ್ಲಿ ಮೋಹನ್‌ಲಾಲ್‌ ನಟನಾಗಿ ಹೆಸರು ಮಾಡಿದ್ದಾರೆ. ಆದರೆ, ಅದಕ್ಕಿಂತ ಹೆಚ್ಚಿನದು, ಒಬ್ಬ ಸಾಮಾಜಿಕ ಕಾರ್ಯಕರ್ತನಾಗಿ ಬೆಳೆಸುವ ಪ್ರಯತ್ನ ನಡೆದಿದೆ ಎನ್ನಲಾಗಿದೆ.

ಕೇರಳ ಬಿಜೆಪಿ ಮಾಜಿ ಮುಖಂಡ ಕುಮ್ಮನಾಂ ರಾಜಶೇಖರನ್‌ ಅವರನ್ನು ತಿರುವನಂತಪುರನಿಂದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಸಿಲು ನಿರ್ಧರಿಸಲಾಗಿತ್ತು. ಆದರೆ, ಮಿಜೋರಾಂ ರಾಜ್ಯಪಾಲರಾಗಿ ರಾಜಶೇಖರನ್‌ ನೇಮಕವಾಗಿರುವ ಕಾರಣದಿಂದ ಆ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆರ್‌ಎಸ್‌ಎಸ್‌ ಪ್ರಯತ್ನಿಸುತ್ತಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago