Featured

ಲೋಕಸಭಾ ಚುನಾವಣೆ: ಮೋಹನ್‌ಲಾಲ್ ಕಣಕ್ಕಿಳಿಸಲು ಆರ್‌ಎಸ್‌ಎಸ್‌ ಕಾರ್ಯತಂತ್ರ

ನವದೆಹಲಿ: ಬಿಜೆಪಿ ಅಭ್ಯರ್ಥಿಯಾಗಿ ಮಲಯಾಳಂ ಸೂಪರ್‌ಸ್ಟಾರ್‌ ಮೋಹನ್‌ಲಾಲ್‌ ಅವರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಆರ್‌ಎಸ್‌ಎಸ್‌ ಪ್ರಯತ್ನಿಸುತ್ತಿರುವುದಾಗಿ ತಿಳಿದು ಬಂದಿದೆ.

ರಾಷ್ಟ್ರಪ್ರಶಸ್ತಿ ವಿಜೇತ ನಟ ಮೋಹನ್‌ಲಾಲ್‌(58) ಅವರನ್ನು ಕೇರಳದ ತಿರುವನಂತಪುರಂನಿಂದ ಸ್ಪರ್ಧಿಸುವಂತೆ ಕೇಳಲಾಗಿದೆ. ಅವರು ಬಿಜೆಪಿ ಸೇರಲಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಡಿದೆಯಾದರೂ ಮೋಹನ್‌ಲಾಲ್‌ ಇದನ್ನು ಖಚಿತ ಪಡಿಸಿಲ್ಲ.

ಮೋಹನ್‌ಲಾಲ್‌ರನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಆರ್‌ಎಸ್‌ಎಸ್‌ ಹೆಚ್ಚಿನ ಆಸಕ್ತಿ ವಹಿಸಿದೆ ಹಾಗೂ ಸಭೆ ನಡೆಸಿ ಚರ್ಚಿಸುತ್ತಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಆದರೆ, ಆರ್‌ಎಸ್‌ಎಸ್‌ ಸಭೆಯ ಕುರಿತು ಬಿಜೆಪಿಗೆ ರಾಜ್ಯ ಘಟಕದ ಮುಖಂಡರಿಗೆ ಮಾಹಿತಿ ರವಾನೆಯಾಗಿಲ್ಲ.

ವೈಯನಾಡಿನಲ್ಲಿ ತಮ್ಮ ಫೌಂಡೇಷನ್‌ ಆಯೋಜಿಸಿರುವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲು ಸೋಮವಾರ ಮೋಹನ್‌ಲಾಲ್‌ ದೆಹಲಿ ಭೇಟಿ ನೀಡಿದ್ದರು. ಈ ಭೇಟಿಯ ಬಳಿಕ ನಟನ ರಾಜಕೀಯ ಪ್ರವೇಶದ ಕುರಿತು ಸುದ್ದಿ ಹರಡಿದೆ.

ವಿಶ್ವಶಾಂತಿ ಫೌಂಡೇಷನ್‌: ಮೋಹನ್‌ಲಾಲ್‌ ತನ್ನ ತಂದೆ ವಿಶ್ವನಾಥನ್‌ ನಾಯರ್‌ ಮತ್ತು ತಾಯಿ ಶಾಂತಾಕುಮಾರಿ ಅವರ ಸ್ಮರಣಾರ್ಥ ವಿಶ್ವಶಾಂತಿ ಫೌಂಡೇಷನ್‌ ಸ್ಥಾಪಿಸಿದ್ದಾರೆ. ವೈಯನಾಡಿನಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಸಂಸ್ಥೆ ನಿರ್ಮಿಸಲಾಗಿದ್ದು, ಇದರ ಉದ್ಘಾಟನೆಗೆ ಪ್ರಧಾನಿ ಅವರನ್ನು ಆಹ್ವಾನಿಸಲಾಗಿದೆ. ಪ್ರವಾಹ ಪರಿಹಾರ ಕಾರ್ಯಗಳಲ್ಲಿ ವಿಶ್ವಶಾಂತಿ ಫೌಂಡೇಷನ್‌ ಆರ್‌ಎಸ್‌ಎಸ್‌ನ ಸೇವಾ ಭಾರತಿಯೊಂದಿಗೆ ಕೈಜೋಡಿಸಿದೆ.

ಈ ಫೌಂಡೇಷನ್‌ ಮೂಲಕ ಮತ್ತಷ್ಟು ಸಮಾಜಮುಖಿ ಕಾರ್ಯಗಳನ್ನು ಯೋಜಿಸಲಾಗಿದ್ದು, ಆರ್‌ಎಸ್‌ಎಸ್ ಇದರ ಬೆನ್ನೆಗೆ ನಿಂತಿದೆ. ಕೇರಳದಲ್ಲಿ ಮೋಹನ್‌ಲಾಲ್‌ ನಟನಾಗಿ ಹೆಸರು ಮಾಡಿದ್ದಾರೆ. ಆದರೆ, ಅದಕ್ಕಿಂತ ಹೆಚ್ಚಿನದು, ಒಬ್ಬ ಸಾಮಾಜಿಕ ಕಾರ್ಯಕರ್ತನಾಗಿ ಬೆಳೆಸುವ ಪ್ರಯತ್ನ ನಡೆದಿದೆ ಎನ್ನಲಾಗಿದೆ.

ಕೇರಳ ಬಿಜೆಪಿ ಮಾಜಿ ಮುಖಂಡ ಕುಮ್ಮನಾಂ ರಾಜಶೇಖರನ್‌ ಅವರನ್ನು ತಿರುವನಂತಪುರನಿಂದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಸಿಲು ನಿರ್ಧರಿಸಲಾಗಿತ್ತು. ಆದರೆ, ಮಿಜೋರಾಂ ರಾಜ್ಯಪಾಲರಾಗಿ ರಾಜಶೇಖರನ್‌ ನೇಮಕವಾಗಿರುವ ಕಾರಣದಿಂದ ಆ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆರ್‌ಎಸ್‌ಎಸ್‌ ಪ್ರಯತ್ನಿಸುತ್ತಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago