Featured

ಲೋಕಸಭಾ ಚುನಾವಣೆ : ಶಸ್ತ್ರಾಸ್ತ್ರಗಳ ಬಳಕೆ ನಿಷೇಧ : ಜಿಲ್ಲಾಧಿಕಾರಿ ಆದೇಶ – Vishwanews24

ಉಡುಪಿ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು. ಎಪ್ರಿಲ್ 18 ರಂದು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದನ್ನು ಖಾತರಿ ಪಡಿಸುವ ಸಲುವಾಗಿ ಆಯ್ದ ಪರವಾನಿಗೆ ಹೊಂದಿರುವಂತಹ ಪರವಾನಿಗೆ ದಾರರನ್ನು ಪೂರ್ವಭಾವಿ ಪರಿಶೀಲನೆ ಮಾಡಿ, ಚುನಾವಣೆಯ ಅವಧಿಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಆಯುಧ, ಶಸ್ತ್ರಾಸ್ತ್ರ, ಮಾರಕಾಯುಧಗಳು, ಮದ್ದು ಗುಂಡುಗಳನ್ನು ಹೊಂದುವುದು, ಸಾಗಿಸುವುದು ಮತ್ತು ಬಳಸುವುದರ ಮೇಲೆ ನಿರ್ಭಂಧಗಳನ್ನು ವಿಧಿಸುವುದು ಅತೀ ಅವಶ್ಯಕವೆಂದು ಮನಗಂಡು ಜಿಲ್ಲಾಧಿಕಾರಿ ಹೆಪ್ಸಿಪಾ ರಾಣಿ ಕೊರ್ಲಪಾಟಿ ಚುನಾವಣಾ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿಷೇದಿಸಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಈ ಆದೇಶ ಹೊರಡಿಸಿದ ದಿನದಿಂದ ಲೋಕಸಭಾ ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗಿನ ಅವಧಿಯಲ್ಲಿ ಯಾವುದೇ ಶಸ್ತ್ರಾಸ್ತ್ರಗಳು, ಆಯುಧಗಳು ಮತ್ತು ಮದ್ದು ಗುಂಡುಗಳೊಂದಿಗೆ ಸಂಚರಿಸುವುದನ್ನು ಮತ್ತು ಅವುಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆತ್ಮ ರಕ್ಷಣೆಗಾಗಿ ಮತ್ತು ಕೃಷಿ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು (ಎಸ್.ಬಿ.ಬಿ.ಎಲ್/ ಡಿ.ಬಿ.ಬಿ.ಎಲ್/ ಎಸ್.ಬಿ.ಎಂ.ಎಲ್/ ಡಿ.ಬಿ.ಎಂ.ಎಲ್/ ಎನ್.ಪಿ.ಬಿ./ ರೈಫಲ್) ಶಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ವಿವಿದ ಶಸ್ತ್ರಾಸ್ತ್ರಗಳನ್ನು ತಮ್ಮ ವಿಳಾಸ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಅಥವಾ ಅಧಿಕೃತವಾಗಿ ಪರವಾನಿಗೆ ಹೊಂದಿರುವ ಡೀಲರ್ ಶಾಪ್‍ಗಳಲ್ಲಿ ಮಾತ್ರ ಕಡ್ಡಾಯವಾಗಿ ವಿಳಂಬ ಮಾಡದೆ ಮಾರ್ಚ್ 18 ರ ಒಳಗೆ ಠೇವಣಿ ಮಾಡಿ ರಶೀದಿ ಪಡೆಯಬೇಕು ಚುನಾವಣಾ ಫಲಿತಾಂಶ ಘೋಷಣೆಯಾದ ದಿನದಿಂದ ಒಂದು ವಾರದ ನಂತರ ಶಸ್ತ್ರಾಸ್ತ್ರ ಠೇವಣಿ ಪಡೆದ ಠಾಣಾಧಿಕಾರಿಗಳಿಂದ ಅಥವಾ ಡೀಲರ್‍ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರುಪಡೆದು ಕೊಳ್ಳಬಹುದು. ಈ ನಿಷೇಧ ಆದೇಶವು ಸರಕಾರಿ ಕರ್ತವ್ಯಕ್ಕೆ ಹಾಗೂ ಬ್ಯಾಂಕ್ ಸೆಕ್ಯೂರಿಟಿ ಸಂಸ್ಥೆಗಳ ಭದ್ರತೆ ಹಾಗೂ ಸಂರಕ್ಷತಾ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ವೇಳೆ ಶಸ್ತ್ರಾಸ್ತ್ರ ಆಯುಧ ಬಳಸುವುದಕ್ಕೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಆದೇಶಕ್ಕೆ ವ್ಯತಿರಿಕ್ತವಾಗಿ ಹಾಗೂ ಯಾವುದೇ ರೀತಿಯ ಕಾನೂನು ಬಾಹಿರವಾಗಿ ಪರವಾನಿಗೆ ರಹಿತ ಶಸ್ತ್ರಾಸ್ತ್ರ /ಆಯುಧ ಇತ್ಯಾದಿಗಳ ಸಂಗ್ರಹಣೆ, ಬಳಕೆ, ಸಾಗಾಟ ಮಾಡುವುತ್ತಿರುವ ಸುಳಿವು ದೊರಕಿದ್ದಲ್ಲಿ ಈ ಬಗ್ಗೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

10 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

10 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

11 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

11 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

14 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

14 hours ago