Featured

ಲೋಕಸಭಾ ಚುನಾವಣೆ –  ಸಮರ್ಪಕ ದಾಖಲೆಗಳಿಲ್ಲದೆ 50,000ರೂ. ಕ್ಕೂ ಮೀರಿದ ನಗದು ಕೊಂಡೊಯ್ಯುವಂತಿಲ್ಲ: ಉಡುಪಿ ಜಿಲ್ಲಾಧಿಕಾರಿ – Vishwanews24

ಲೋಕಸಭಾ ಚುನಾವಣೆ –  ಸಮರ್ಪಕ ದಾಖಲೆಗಳಿಲ್ಲದೆ 50,000ರೂ. ಕ್ಕೂ ಮೀರಿದ ನಗದು ಕೊಂಡೊಯ್ಯುವಂತಿಲ್ಲ: ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಮರ್ಪಕ ದಾಖಲೆಗಳಿಲ್ಲದೆ ರೂ.50,000/- ಕ್ಕೂ ಮೀರಿದ ನಗದು ಹಣವನ್ನು ಕೊಂಡೊಯ್ಯುವಂತಿಲ್ಲ ಎಂದು ಉಡುಪಿ ಚಿಕ್ಕಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಂದು ವೇಳೆ ದಾಖಲೆ ರಹಿತ ನಗದು ದೊರೆತಲ್ಲಿ ಸದ್ರಿ ನಗದನ್ನು ಮುಟ್ಟುಗೋಲು ಹಾಕಲಾಗುವುದು, ಹಾಗೂ ಸಂಬಂಧಿಸಿದವರ ಮೇಲೆ ಪ್ರಕರಣ ದಾಖಲಿಸಲಾಗುವುದು. ಆದ್ದರಿಂದ ಸಾಧ್ಯವಾದಷ್ಟು ಮಟ್ಟಿಗೆ ನಗದು ಹಣ ಸಾಗಾಣಿಕೆ ಬದಲಿಗೆ ಖಾತೆ ವರ್ಗಾವಣೆ, UPI ಹಾಗೂ ಇತರೆ ಮಾಧ್ಯಮದ ಮೂಲಕ ಹಣವನ್ನು ವರ್ಗಾಯಿಸುವಂತೆ ಸೂಚನೆ ನೀಡಿದ್ದಾರೆ.

ಹಾಗೂ ಈ ವಿಚಾರವಾಗಿ ಸಂಶಯಾಸ್ಪದ ವ್ಯವಹಾರಗಳ ಮೇಲೆ ನಿಗಾ ಇಡಲು ಬ್ಯಾಂಕ್‌ ಮತ್ತು ಆದಾಯ ತೆರಿಗೆ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಚುನಾವಣಾ ಕೋಶ ರಚಿಸಲಾಗಿದೆ. ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯ ಪೂರ್ಣ ಪ್ರಮಾಣದ ಅನುಷ್ಟಾನಕ್ಕಾಗಿ ಒಟ್ಟು 15 ಚೆಕ್‌ಪೋಸ್ಟ್‌ಗಳನ್ನು ಗುರುತಿಸಲಾಗಿದ್ದು, ಈ ಚೆಕ್‌ಪೋಸ್ಟ್‌ಗಳಲ್ಲಿ 24×7 ಮಾದರಿಯಲ್ಲಿ ಕಾರ್ಯ ನಿರ್ವಹಿಸಲು ಒಟ್ಟು 52 SST ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಲಾಗಿದೆ. ಜೊತೆಗೆ ಈ ಚೆಕ್‌ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ತಮ್ಮ ವಾಹನಗಳನ್ನು ತಪಾಸಣೆಗೊಳಿಸಲು ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆಯಲ್ಲಿ HOME VOTING ಮಾಡಲು ಬಯಸುವ ಹಿರಿಯ ನಾಗರೀಕರ ವಯಸ್ಸನ್ನು ಆಯೋಗವು 80 ರಿಂದ 85 ವರ್ಷಕ್ಕೆ ಪರಿಷ್ಕರಿಸಲಾಗಿರುತ್ತದೆ. ಹಿರಿಯ ನಾಗರೀಕರು ಹಾಗೂ ವಿಕಲಚೇತನರ ಮನೆಯಂದಲೇ ಮತ ಚಲಾಯಿಸಲು ಅವಕಾಶವಿದೆ. ಹಿರಿಯ ನಾಗರೀಕರು ಹಾಗೂ ವಿಕಲಚೇತನರಿಗೆ ಮತಗಟ್ಟೆಗೆ ತೆರಳಿ ಮತದಾನ ಮಾಡಲು ವಾಹನದ ವ್ಯವಸ್ಥೆಯನ್ನು ಮಾಡಲಾಗಿದ್ದು, ತೀರಾ ಅಶಕ್ತರು ಮಾತ್ರ HOME VOTING ಸೌಲಭ್ಯವನ್ನು ಪಡೆಯಬಹುದಾಗಿದೆ.

ಎಲ್ಲಾ ಮತದಾರರು ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಹಬ್ಬವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಸಾರ್ವಜನಿಕರು ಸಹಕಾರ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

23 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

23 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

23 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

24 hours ago