ಮಂಡ್ಯ: ಹೈದರಾಬಾದ್ಗೆ ಹೋಗಿ ಅಲ್ಲಿಂದ ಬರುವಷ್ಟರಲ್ಲಿ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಉಹಾಪೋಹ ಎದ್ದಿದೆ. ಇದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ನಟ ಡಾಲಿ ಧನಂಜಯ್ ಹೇಳಿದ್ದಾರೆ. ಈ ಮೂಲಕ ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ವಿಚಾರದ ವದಂತಿಗೆ ಬ್ರೇಕ್ ಹಾಕಿದ್ದಾರೆ.
ಶ್ರೀರಂಗಪಟ್ಟಣದ ಕೆ. ಶೆಟ್ಟಿಹಳ್ಳಿಯ ನಿರ್ದಿಗಂತ ರಂಗ ಶಾಲೆಯಲ್ಲಿ `ಫೋಟೋ’ ಸಿನೆಮಾ ಟ್ರೇಲರ್ ಬಿಡುಗಡೆ ಲಾಂಚ್ ಮಾಡಿ ಮಾತನಾಡಿದ ಅವರು, ಈಗ ನಾನು ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಸಿನಿಮಾದಲ್ಲಿ ಜನರಿಂದ ಸಿಕ್ಕಿರುವ ಪ್ರೀತಿ ದೊಡ್ಡದು. ಯಾವುದೇ ಕ್ಷೇತ್ರಕ್ಕೆ ಹೋದ್ರೂ ಅಲ್ಲಿ ಅದ್ಭುತವಾಗಿ ಕೆಲಸ ಮಾಡಬೇಕು. ನಾನು ಸಿನಿಮಾ ಮಾಡ್ತಿನಿ. ತುಂಬಾ ಕನಸು ಕಟ್ಟಿಕೊಂಡು ಈ ಕ್ಷೇತ್ರಕ್ಕೆ ಬಂದಿದ್ದೀನಿ. ಇಲ್ಲಿದ್ದುಕೊಂಡೆ ಕೆಲಸ ಮಾಡಬಹುದು. ಚುನಾವಣೆ ಸ್ಪರ್ಧೆ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ. ಮಾಧ್ಯಮದವರೇ ಟಿಕೆಟ್ ಕೊಡಿಸಿ ಚುನಾವಣೆಗೂ ನಿಲ್ಲಿಸಿಬಿಟ್ಟಿದ್ದೀರಿ ಎಂದಿದ್ದಾರೆ.
ಲಿಡ್ಕರ್ ಬ್ರಾಂಡ್ಗೆ ರಾಯಭಾರಿಯಾಗಿದ್ದು ನನಗೆ ಖುಷಿ ಇದೆ. ಅದು ಹಲವು ಬಡ ಜನರ ಬದುಕಿಗೆ ಸಂಬಂಧಿಸಿದೆ. ಈ ಹಿಂದೆ ರಾಜಕೀಯ ಚರ್ಚೆಯಾಗಲಿ ಹಾಗೂ ಉದ್ದೇಶವಾಗಲಿ ಇಲ್ಲ. ನಾನು ನನ್ನ ಸಿನಿಮಾ ಕ್ಷೇತ್ರಕ್ಕೆ ಮಾತ್ರ ಸಿಮೀತವಾಗಿರುತ್ತೇನೆ. ರಾಜಕಾರಣ ಬೇರೆ, ನಾಯಕ ಆಗಿರೋದು ಬೇರೆ. ಕಳೆದ ಚುನಾವಣೆ ಸಮಯದಲ್ಲೇ ನಾನು ಪ್ರಚಾರಕ್ಕೆ ಹೋಗಿಲ್ಲ. ಎಲ್ಲಾ ಪಕ್ಷಗಳಲ್ಲೂ ನನಗೆ ಸ್ನೇಹಿತರಿದ್ದಾರೆ. ಈ ಚುನಾವಣೆಯಲ್ಲೂ ಪ್ರಚಾರಕ್ಕೆ ಹೋಗುವುದರ ಬಗ್ಗೆ ಯೋಚನೆ ಮಾಡಿಲ್ಲ. ಇಲ್ಲಿ ನಾವು ಏನೇ ಮಾಡಿದ್ರೂ ಏನಾದ್ರೂ ಒಂದು ಹೇಳ್ತಾನೆ ಇರುತ್ತಾರೆ. ಸಮಾಜದಲ್ಲಿನ ಕೆಳ ವರ್ಗದ ಜನರನ್ನ ಮೇಲೆತ್ತುವವರೇ ಒಳ್ಳೆಯ ನಾಯಕ ಎಂದಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…