Featured

ಲೋಕಸಭಾ ಚುನಾವಣೆ ; NDA 358, INDIA 110 ಸ್ಥಾನ : ಟೈಮ್ಸ್‌ ನೌ ಸಮೀಕ್ಷೆ – Vishwanews24

 

ಲೋಕಸಭಾ ಚುನಾವಣೆ ; NDA 358, INDIA 110 ಸ್ಥಾನ : ಟೈಮ್ಸ್‌ ನೌ ಸಮೀಕ್ಷೆ

ನವದೆಹಲಿ: ಈಗ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಗೆ (NDA) 358-398 ಸ್ಥಾನ ಸಿಗಲಿದೆ ಟೈಮ್ಸ್‌ನೌ ವಾಹಿನಿ ನಡೆಸಿದ ಸಮೀಕ್ಷೆ ತಿಳಿಸಿದೆ.

INDIA ಒಕ್ಕೂಟಕ್ಕೆ 110-130, ವೈಎಸ್‌ಆರ್‌ಸಿಪಿ 21-22, ಬಿಜೆಡಿ 10-11, ಇತರರು 11-15 ಸ್ಥಾನ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದೆ.

2019ರ ಚುನಾವಣೆಯಲ್ಲಿ ಎನ್‌ಡಿಎ 303, INDIA ಒಕ್ಕೂಟ 116, ಇತರರು 44 ಸ್ಥಾನವನ್ನು ಗೆದ್ದಿದ್ದರು. ಒಟ್ಟು 543 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆ ನಡೆಯಲಿದೆ.

ಕರ್ನಾಟಕದಲ್ಲಿ ಎಷ್ಟು?
ಬಿಜೆಪಿ 21-23, ಕಾಂಗ್ರೆಸ್‌  4-6, ಜೆಡಿಎಸ್‌ 1-2 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನವನ್ನು ಗೆದ್ದರೆ, ಬೆಂಗಳೂರು ಗ್ರಾಮಾಂತರದಿಂದ ಡಿಕೆ ಸುರೇಶ್‌, ಹಾಸನದಿಂದ ಜೆಡಿಎಸ್‌ನ ಪ್ರಜ್ವಲ್‌ ರೇವಣ್ಣ, ಮಂಡ್ಯದಿಂದ ಸುಮಲತಾ ಗೆದ್ದಿದ್ದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಎಂಸಿ ಕೋಟೆಯನ್ನು ಛಿದ್ರ ಮಾಡಲಿದೆ. ಗುಜರಾತ್‌, ಮಧ್ಯಪ್ರದೇಶ, ರಾಜಸ್ಥಾನಗಳು ಸಂಪೂರ್ಣವಾಗಿ ಎನ್‌ಡಿಎ ಗೆಲ್ಲಲಿದೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ INDA ಒಕ್ಕೂಟ 65 ಸ್ಥಾನಗಳಿಸಲಿದೆ ಎಂದು ಹೇಳಿದೆ.

ಈ ಬಾರಿ 400 ಸ್ಥಾನ ಗೆಲ್ಲಬೇಕು ಎಂದು ಬಿಜೆಪಿ ಘೋಷಣೆ ಮೊಳಗಿಸುತ್ತಿದ್ದರೂ 400 ಸ್ಥಾನಗಳನ್ನು ಎನ್‌ಡಿಎ ಗಳಿಸುವುದು ಕಷ್ಟ ಎಂದು ಸಮೀಕ್ಷೆ ತಿಳಿಸಿದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago