Featured

ಲೋಕಸಭಾ ಚುನಾವಣೆ ; NDA 358, INDIA 110 ಸ್ಥಾನ : ಟೈಮ್ಸ್‌ ನೌ ಸಮೀಕ್ಷೆ – Vishwanews24

 

ಲೋಕಸಭಾ ಚುನಾವಣೆ ; NDA 358, INDIA 110 ಸ್ಥಾನ : ಟೈಮ್ಸ್‌ ನೌ ಸಮೀಕ್ಷೆ

ನವದೆಹಲಿ: ಈಗ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಗೆ (NDA) 358-398 ಸ್ಥಾನ ಸಿಗಲಿದೆ ಟೈಮ್ಸ್‌ನೌ ವಾಹಿನಿ ನಡೆಸಿದ ಸಮೀಕ್ಷೆ ತಿಳಿಸಿದೆ.

INDIA ಒಕ್ಕೂಟಕ್ಕೆ 110-130, ವೈಎಸ್‌ಆರ್‌ಸಿಪಿ 21-22, ಬಿಜೆಡಿ 10-11, ಇತರರು 11-15 ಸ್ಥಾನ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದೆ.

2019ರ ಚುನಾವಣೆಯಲ್ಲಿ ಎನ್‌ಡಿಎ 303, INDIA ಒಕ್ಕೂಟ 116, ಇತರರು 44 ಸ್ಥಾನವನ್ನು ಗೆದ್ದಿದ್ದರು. ಒಟ್ಟು 543 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆ ನಡೆಯಲಿದೆ.

ಕರ್ನಾಟಕದಲ್ಲಿ ಎಷ್ಟು?
ಬಿಜೆಪಿ 21-23, ಕಾಂಗ್ರೆಸ್‌  4-6, ಜೆಡಿಎಸ್‌ 1-2 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನವನ್ನು ಗೆದ್ದರೆ, ಬೆಂಗಳೂರು ಗ್ರಾಮಾಂತರದಿಂದ ಡಿಕೆ ಸುರೇಶ್‌, ಹಾಸನದಿಂದ ಜೆಡಿಎಸ್‌ನ ಪ್ರಜ್ವಲ್‌ ರೇವಣ್ಣ, ಮಂಡ್ಯದಿಂದ ಸುಮಲತಾ ಗೆದ್ದಿದ್ದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಎಂಸಿ ಕೋಟೆಯನ್ನು ಛಿದ್ರ ಮಾಡಲಿದೆ. ಗುಜರಾತ್‌, ಮಧ್ಯಪ್ರದೇಶ, ರಾಜಸ್ಥಾನಗಳು ಸಂಪೂರ್ಣವಾಗಿ ಎನ್‌ಡಿಎ ಗೆಲ್ಲಲಿದೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ INDA ಒಕ್ಕೂಟ 65 ಸ್ಥಾನಗಳಿಸಲಿದೆ ಎಂದು ಹೇಳಿದೆ.

ಈ ಬಾರಿ 400 ಸ್ಥಾನ ಗೆಲ್ಲಬೇಕು ಎಂದು ಬಿಜೆಪಿ ಘೋಷಣೆ ಮೊಳಗಿಸುತ್ತಿದ್ದರೂ 400 ಸ್ಥಾನಗಳನ್ನು ಎನ್‌ಡಿಎ ಗಳಿಸುವುದು ಕಷ್ಟ ಎಂದು ಸಮೀಕ್ಷೆ ತಿಳಿಸಿದೆ.

 

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago