ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನಿಂದ ಪಾಠ ಕಲಿತಿರುವ ಬಿಜೆಪಿ ಹೈಕಮಾಂಡ್ ಲೋಕಸಭೆ ಚುನಾವಣೆಗೆ ಬೇರೆ ರೀತಿಯ ತಂತ್ರಗಾರಿಕೆ ಪ್ರಯೋಗಿಸಲು ನಿರ್ಧರಿಸಿದೆ. ರಾಜ್ಯದ ಪ್ರಬಲ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೆ ಚುನಾವಣೆಯ ಸಂಪೂರ್ಣ ಅಧಿಕಾರ ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ವೇಗಕ್ಕೆ ಅಂಕುಶ ಹಾಕಿತ್ತು. ಹೀಗಾಗಿ ಬಿಜೆಪಿ ಗೆಲುವಿನ ಸನಿಹದಲ್ಲಿ ಮುಗ್ಗರಿಸಿತ್ತು. ಇದರಿಂದ ಪಾಠ ಕಲಿತಿರುವ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ತನ್ನ ಹಳೆಯ ತಂತ್ರಗಾರಿಕೆಗಳನ್ನು ಬದಿಗಿಟ್ಟು, ಚುನಾವಣೆಯ ಉಸ್ತುವಾರಿಯನ್ನು ಬಿಎಸ್ವೈ ವಹಿಸಲು ನಿರ್ಧರಿಸಿದೆ.
20 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿ ಹೊಂದಿರುವ ಬಿಜೆಪಿ ಹೈಕಮಾಂಡ್, ಚುನಾವಣೆ ಸಿದ್ಧತೆ, ಅಭ್ಯರ್ಥಿ ಆಯ್ಕೆ, ಪ್ರಚಾರ ತಂತ್ರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವನ್ನು ಯಡಿಯೂರಪ್ಪ ಅವರಿಗೆ ನೀಡಬೇಕೆಂದು ಹೈಕಮಾಂಡ್ ನಿರ್ಧರಿಸಿರುವುದಾಗಿ ಗೊತ್ತಾಗಿದೆ.
ಹೀಗಾಗಿಯೇ ಅಧಿಕ ಸ್ಥಾನಗಳಲ್ಲಿ ಗೆದ್ದು ರಾಜ್ಯದಲ್ಲಿ ತಮ್ಮ ವರ್ಚಸ್ಸು ಕುಂದಿಲ್ಲ ಎಂದು ಸಾಬೀತುಪಡಿಸಲು ಯಡಿಯೂರಪ್ಪ ಅವರೂ ಕೂಡ ಉತ್ಸುಕರಾಗಿದ್ದಾರೆ. ಮೇಲಿಂದ ಮೇಲೆ ಸಭೆಗಳನ್ನು ನಡೆಸುತ್ತಿರುವ ಅವರು ಸೂಕ್ತ ಅಭ್ಯರ್ಥಿ ಆಯ್ಕೆಗಾಗಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಿದ್ದಾರೆ ಎನ್ನಲಾಗಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…