ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನಿಂದ ಪಾಠ ಕಲಿತಿರುವ ಬಿಜೆಪಿ ಹೈಕಮಾಂಡ್ ಲೋಕಸಭೆ ಚುನಾವಣೆಗೆ ಬೇರೆ ರೀತಿಯ ತಂತ್ರಗಾರಿಕೆ ಪ್ರಯೋಗಿಸಲು ನಿರ್ಧರಿಸಿದೆ. ರಾಜ್ಯದ ಪ್ರಬಲ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೆ ಚುನಾವಣೆಯ ಸಂಪೂರ್ಣ ಅಧಿಕಾರ ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ವೇಗಕ್ಕೆ ಅಂಕುಶ ಹಾಕಿತ್ತು. ಹೀಗಾಗಿ ಬಿಜೆಪಿ ಗೆಲುವಿನ ಸನಿಹದಲ್ಲಿ ಮುಗ್ಗರಿಸಿತ್ತು. ಇದರಿಂದ ಪಾಠ ಕಲಿತಿರುವ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ತನ್ನ ಹಳೆಯ ತಂತ್ರಗಾರಿಕೆಗಳನ್ನು ಬದಿಗಿಟ್ಟು, ಚುನಾವಣೆಯ ಉಸ್ತುವಾರಿಯನ್ನು ಬಿಎಸ್ವೈ ವಹಿಸಲು ನಿರ್ಧರಿಸಿದೆ.
20 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿ ಹೊಂದಿರುವ ಬಿಜೆಪಿ ಹೈಕಮಾಂಡ್, ಚುನಾವಣೆ ಸಿದ್ಧತೆ, ಅಭ್ಯರ್ಥಿ ಆಯ್ಕೆ, ಪ್ರಚಾರ ತಂತ್ರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವನ್ನು ಯಡಿಯೂರಪ್ಪ ಅವರಿಗೆ ನೀಡಬೇಕೆಂದು ಹೈಕಮಾಂಡ್ ನಿರ್ಧರಿಸಿರುವುದಾಗಿ ಗೊತ್ತಾಗಿದೆ.
ಹೀಗಾಗಿಯೇ ಅಧಿಕ ಸ್ಥಾನಗಳಲ್ಲಿ ಗೆದ್ದು ರಾಜ್ಯದಲ್ಲಿ ತಮ್ಮ ವರ್ಚಸ್ಸು ಕುಂದಿಲ್ಲ ಎಂದು ಸಾಬೀತುಪಡಿಸಲು ಯಡಿಯೂರಪ್ಪ ಅವರೂ ಕೂಡ ಉತ್ಸುಕರಾಗಿದ್ದಾರೆ. ಮೇಲಿಂದ ಮೇಲೆ ಸಭೆಗಳನ್ನು ನಡೆಸುತ್ತಿರುವ ಅವರು ಸೂಕ್ತ ಅಭ್ಯರ್ಥಿ ಆಯ್ಕೆಗಾಗಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಿದ್ದಾರೆ ಎನ್ನಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…