Featured

ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ; ಮುಂದಿನ ತಿಂಗಳು ಪ್ರಧಾನಿ ಮೋದಿ ರ್ಯಾಲಿ

ಬೆಂಗಳೂರು: 2019ರ ಲೋಕಸಭಾ ಚುನಾವಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈಗಾಗಲೇ ಪ್ರಚಾರದ ಸಿದ್ಧತೆಯಲ್ಲಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ಅವರು ದೇಶಾದ್ಯಂತ ಸುಮಾರು 50 ರ್ಯಾಲಿಗಳಲ್ಲಿ ಭಾಗವಹಿಸಲಿದ್ದು ಅವುಗಳಲ್ಲಿ ಕರ್ನಾಟಕದಲ್ಲಿ ನಡೆಸುವ ರ್ಯಾಲಿಗಳು ಕೂಡ ಅವರ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಮುಖವಾಗಿದೆ.

ಪಂಜಾಬ್ ರಾಜ್ಯದ ಮುಕ್ತಸಾರ್ ಜಿಲ್ಲೆಯಲ್ಲಿ ಕಳೆದ ವಾರ ಮತ್ತು ನಿನ್ನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಮೂಲಕ ಪ್ರಧಾನಿ ಮೋದಿಯವರು ಈಗಾಗಲೇ ತಮ್ಮ ಮಿಂಚಿನ ದಾಳಿಯ ರೀತಿಯ ಪ್ರಚಾರ ರ್ಯಾಲಿಗಳನ್ನು ಭಾಗವಹಿಸಿದ್ದಾರೆ. ಮುಂದಿನ ತಿಂಗಳು ಕರ್ನಾಟಕದಲ್ಲಿ ಕೂಡ ಅವರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

ಮೋದಿಯವರು ಕರ್ನಾಟಕದಲ್ಲಿ ಬೃಹತ್ ರೈತ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಅದು ಹಾವೇರಿ ಅಥವಾ ಚಿಕ್ಕೋಡಿಯಲ್ಲಿ ಆಗಿರಬಹುದು. ಸ್ಥಳ ಮತ್ತು ದಿನಾಂಕ ಸದ್ಯದಲ್ಲಿಯೇ ನಿಗದಿಯಾಗಲಿದೆ. ಅದು ಆಗಸ್ಟ್ ಮಧ್ಯಭಾಗದಲ್ಲಿ ಇರಬಹುದು. ಲೋಕಸಭೆ ಚುನಾವಣೆಗೆ ಮುನ್ನ ರೈತರನ್ನು ಭೇಟಿ ಮಾಡುವ ಕಾರ್ಯಕ್ರಮ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್  ತಿಳಿಸಿದ್ದಾರೆ.

ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ ಗಢ ರಾಜ್ಯಗಳಲ್ಲಿ ಈ ವರ್ಷ ನಡೆಯುವ ಚುನಾವಣಾ ಸಂಬಂಧ ರ್ಯಾಲಿಗಳಿಗೆ ಹೊರತಾದ ರ್ಯಾಲಿ ಇದಾಗಲಿದೆ. ಪ್ರಧಾನಿ ಮೋದಿಯವರು 150 ಕ್ಷೇತ್ರಗಳಲ್ಲಿ ಸುಮಾರು 50 ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ಮೋದಿಯವರ ಜೊತೆಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಹಿರಿಯ ನಾಯಕರಾದ ನಿತಿನ್ ಗಡ್ಕರಿ ಮತ್ತು ರಾಜನಾಥ್ ಸಿಂಗ್ ಅವರು ಕೂಡ ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಜುಲೈ 28ಕ್ಕೆ ಅಮಿತ್ ಶಾ ಭೇಟಿಬಿಜೆಪಿ ಅಧ್ಯಕ್ಷ ಅಮಿತ್ ಶಾ ಇದೇ ತಿಂಗಳ 28ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಪಕ್ಷದಲ್ಲಿ ಸ್ಥಾನಮಾನಗಳನ್ನು ಹಂಚಿಕೆ ಮಾಡಿ ಲೋಕಸಭಾ ಚುನಾವಣೆಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಸನ್ನದ್ಧು ಮಾಡಲಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯವರೆಗೆ ಬಿ ಎಸ್ ಯಡಿಯೂರಪ್ಪನವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆಯಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

10 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

10 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

10 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

13 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

13 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

13 hours ago