Featured

ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ : ಇಂದು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಪ್ರಧಾನಿ ಭೇಟಿ – Vishwanews24

ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ : ಇಂದು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಪ್ರಧಾನಿ ಭೇಟಿ

ಶಿವಮೊಗ್ಗ: ಇಂದು ಪ್ರಧಾನಿ ನರೇಂದ್ರ ಮೋದಿ ಮಲೆನಾಡು ಶಿವಮೊಗ್ಗಕ್ಕೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ನಗರ ಪೂರ್ತಿ ಕಮಲಮಯವಾಗಿದೆ.

ಕೇರಳದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಅಪರಾಹ್ನ 1:30ಕ್ಕೆ ಶಿವಮೊಗ್ಗದ ಏರ್​ಪೋರ್ಟ್​ಗೆ ಬಂದಿಳಿಯಲಿದ್ದು ಅಲ್ಲಿಂದ ಅಲ್ಲಮಪ್ರಭು ಮೈದಾನದವರೆಗೆ ಸುಮಾರು 14 ಕಿ.ಮೀ ಜಿರೋ ಟ್ರಾಫಿಕ್​ನಲ್ಲಿ ಆಗಮಿಸಲಿದ್ದಾರೆ. ಸಮಾವೇಶದಲ್ಲಿ 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ. ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಪೂರ್ತಿ ಖಾಕಿ ಸರ್ಪಗಾವಲು ಹಾಕಲಾಗಿದೆ. ಜೊತೆಗೆ ಆಯಾಕಟ್ಟಿ ಪ್ರದೇಶಗಳಲ್ಲಿ ಕ್ಷೀಪ್ರ ಕಾರ್ಯಾಚರಣೆ ಪಡೆ, ಅರೆ ಸೇನಾ ಪಡೆಯನ್ನು ನಿಯೋಜಿಸಲಾಗಿದೆ.

ಮೋದಿ ಆಗಮನ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಕೆಲಕಾಲ ಜಿರೋ ಟ್ರಾಫಿಕ್​ಗಾಗಿ ಬಂದ್ ಆಗಲಿವೆ. ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ 2.5 ಲಕ್ಷಕ್ಕೂ ಅಧಿಕ ಜನರನ್ನುದ್ದೇಶಿಸಿ ಚುನಾವಣಾ ಭಾಷಣ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿಯ ಮುಖ್ಯ ಸಚೇತಕ ಎನ್ ರವಿ ಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರಿನ ಅಭ್ಯರ್ಥಿ ಬ್ರಜೇಶ್ ಚೌಟ. ಶಾಸಕರು, ಮಾಜಿ ಶಾಸಕರುಗಳು, ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಆರಗ ಜ್ಞಾನೇಂದ್ರ ಸೇರಿದಂತೆ ಇತರರು ವೇದಿಕೆ ಮೇಲೆ ಇರಲಿದ್ದಾರೆ .

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

20 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

21 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

23 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

23 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

24 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

24 hours ago