ಶಿವಮೊಗ್ಗ: ಇಂದು ಪ್ರಧಾನಿ ನರೇಂದ್ರ ಮೋದಿ ಮಲೆನಾಡು ಶಿವಮೊಗ್ಗಕ್ಕೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ನಗರ ಪೂರ್ತಿ ಕಮಲಮಯವಾಗಿದೆ.
ಕೇರಳದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಅಪರಾಹ್ನ 1:30ಕ್ಕೆ ಶಿವಮೊಗ್ಗದ ಏರ್ಪೋರ್ಟ್ಗೆ ಬಂದಿಳಿಯಲಿದ್ದು ಅಲ್ಲಿಂದ ಅಲ್ಲಮಪ್ರಭು ಮೈದಾನದವರೆಗೆ ಸುಮಾರು 14 ಕಿ.ಮೀ ಜಿರೋ ಟ್ರಾಫಿಕ್ನಲ್ಲಿ ಆಗಮಿಸಲಿದ್ದಾರೆ. ಸಮಾವೇಶದಲ್ಲಿ 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ. ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಪೂರ್ತಿ ಖಾಕಿ ಸರ್ಪಗಾವಲು ಹಾಕಲಾಗಿದೆ. ಜೊತೆಗೆ ಆಯಾಕಟ್ಟಿ ಪ್ರದೇಶಗಳಲ್ಲಿ ಕ್ಷೀಪ್ರ ಕಾರ್ಯಾಚರಣೆ ಪಡೆ, ಅರೆ ಸೇನಾ ಪಡೆಯನ್ನು ನಿಯೋಜಿಸಲಾಗಿದೆ.
ಮೋದಿ ಆಗಮನ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಕೆಲಕಾಲ ಜಿರೋ ಟ್ರಾಫಿಕ್ಗಾಗಿ ಬಂದ್ ಆಗಲಿವೆ. ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ 2.5 ಲಕ್ಷಕ್ಕೂ ಅಧಿಕ ಜನರನ್ನುದ್ದೇಶಿಸಿ ಚುನಾವಣಾ ಭಾಷಣ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿಯ ಮುಖ್ಯ ಸಚೇತಕ ಎನ್ ರವಿ ಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರಿನ ಅಭ್ಯರ್ಥಿ ಬ್ರಜೇಶ್ ಚೌಟ. ಶಾಸಕರು, ಮಾಜಿ ಶಾಸಕರುಗಳು, ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಆರಗ ಜ್ಞಾನೇಂದ್ರ ಸೇರಿದಂತೆ ಇತರರು ವೇದಿಕೆ ಮೇಲೆ ಇರಲಿದ್ದಾರೆ .
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…